ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕ ಪ್ರವೇಶ ನಿಷೇಧ ಹಿನ್ನೆಲೆ ಮೈಸೂರು ಟೌನ್ಹಾಲ್ಗೆ ಸೀಮಿತವಾಗಿ ಮಹಿಷಾ ದಸರಾ ಆಚರಣೆ ಮಾಡಲು ನಿರ್ಧರಿಸಲಾಗಿದೆ.
ನಗರದ ಪುರಭವನ ಆವರಣದಲ್ಲಿ ಇಂದು (ಅ.13) ಮಹಿಷಾ ದಸರಾ ಆಚರಣೆಗೆ ಮಾಡಲಾಗುತ್ತಿದ್ದು, ಮಹಿಷಾ ದಸರಾ ಆಚರಣೆ ಸಮಿತಿ ಟೌನ್ಹಾಲ್ ಮುಂಭಾಗ ವೇದಿಕೆ ನಿರ್ಮಿಸಿ ಮಹಿಷಾಸುರ ಅವರಿಗೆ ಪುಷ್ಪಾರ್ಚನೆ ಹಾಗೂ ದಮ್ಮ ದೀಕ್ಷಾ ಕಾರ್ಯಕ್ರಮ ಏರ್ಪಡಿಸಲಾಗಿದೆ. ವೇದಿಕೆ ಮೇಲೆ ಮಹಿಷಾಸುರ ಪ್ರತಿಮೆ ಜೊತೆಗೆ ಬುದ್ಧ ಅಂಬೇಡ್ಕರ್ ಪ್ರತಿಮೆ ಇರಿಸಿರುವ ಸದಸ್ಯರು. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮಹಿಷ ಉತ್ಸವ ಮತ್ತು ಧಮ್ಮ ದೀಕ್ಷಾ ಆಚರಣೆ. ಆದರೆ ಮೈಸೂರು ನಗರ ಪೊಲೀಸ್ ಆಯುಕ್ತರು ಕೆಲವು ಷರತ್ತು ವಿಧಿಸಿರುವ ಸರಳವಾಗಿ ಆಚರಣೆ ಮಾಡಲಾಗುತ್ತಿದೆ. ಟೌನ್ ಹಾಲ್ ಮುಂಭಾಗ ಸಾಮಿಯಾನ ಹಾಕಿ ಕಾರ್ಯಕ್ರಮಕ್ಕೆ ಬರುವವರಿಗೆ ಕುರ್ಚಿಗಳ ವ್ಯವಸ್ಥೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಟೌನ್ಹಾಲ್ ಆವರಣದಲ್ಲಿ 200ಕ್ಕೂ ಹಚ್ಚು ಪೊಲೀಸರ ನಿಯೋಜಿಸಲಾಗಿದೆ.