ರಾಗಿಬೊಮ್ಮನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ.ಯೋಗೀಶ್ ಸಲಹೆ
ಪ್ರತಿನಿಧಿವರದಿ ಮಳವಳ್ಳಿ
ಸಾರ್ವಜನಿಕರು ತಮ್ಮ ಮನೆಗಳ ಸುತ್ತಲಿನ ಪರಿಸರವನ್ನು ಸ್ವಚ್ಚವಾಗಿಟ್ಟುಕೊಳ್ಳಲು ಸಾಂಕ್ರಾಮಿಕ ರೋಗಗಳು ಹರಡುವುದನ್ನು ತಡೆಗಟ್ಟಲು ಸಹಕರಿಸುವಂತೆ ತಾಲೂಕಿನ ರಾಗಿಬೊಮ್ಮನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ.ಯೋಗೇಶ್ ಮನವಿಮಾಡಿದರು.
ತಾಲೂಕು ಆರೋಗ್ಯ ಇಲಾಖೆ ಹಾಗೂ ಗ್ರಾಪಂ ಸಹಯೋಗದಲ್ಲಿ ಡೆಂಘೆ ನಿಯಂತ್ರಣ ಸಂಬಂಧ ಶನಿವಾರ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಜಾಗೃತಿ ಜಾಥದ ಜತೆಗೆ ಮನೆ-ಮನೆಗಳಿಗೆ ತೆರಳಿ ಕುಟುಂಬದ ಸದಸ್ಯರಿಗೆ ಸ್ವಚ್ಚತೆಯ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದರು.
ಡೆಂಘೆ ಜ್ವರದ ಹತ್ತಾರು ಪ್ರಕರಣಗಳು ತಾಲೂಕಿನಲ್ಲಿ ಕಂಡುಬಂದು ರೋಗಿಗಳು ಈಗಾಗಲೇ ಗುಣಮುಖರಾಗಿದ್ದಾರೆ. ಗ್ರಾಮದಲ್ಲಿ ಯಾವ ರೀತಿಯಲ್ಲೂ ಕಂಡುಬಾರದಿರುವುದು ಸಂತಸದ ಸಂಗತಿಯಾಗಿದ್ದು, ಆದರೇ ಈ ಸಾಂಕ್ರಾಮಿಕ ಕಾಯಿಲೆಗಳು ಸೊಳ್ಳೆಗಳಿಂದ ಹರಡುವುದರಿಂದ ಇವುಗಳ ನಿಯಂತ್ರಣಕ್ಕೆ ಸೊಳ್ಳೆಗಳ ಸಂತಾನ ತಡೆಗಟ್ಟಬೇಕಿದೆ ಎಂದರು.
ಗ್ರಾಪಂ ಅಧ್ಯಕ್ಷ ಪ್ರಭು ಮಾತನಾಡಿ, ನಮ್ಮ ಪಂಚಾಯಿತಿ ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳಲ್ಲಿ ಚರಂಡಿ ನೀರು ನಿಲ್ಲದಂತೆ ಹಾಗೂ ಸ್ವಚ್ಚತೆ ಕ್ರಮ ವಹಿಸಲಾಗಿದೆ. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಬಗ್ಗೆ ಗ್ರಾಮದ ಎಲ್ಲಾ ಮನೆಗಳಿಗೂ ತೆರಳಿ ಕುಟುಂಬದವರಿಗೆ ಸಲಹೆ ನೀಡಲಾಗುತ್ತಿದ್ದು ಎಂದು ಹೇಳಿದರು.
ಗ್ರಾಪಂ ಸದಸ್ಯ ರವಿ, ಪಿಡಿಒ ಈರಣ್ಣಯ್ಯ, ಕಂಪ್ಯೂಟರ್ ಆಪರೇಟರ್ ನಾಗೇಂದ್ರ, ಆರೋಗ್ಯ ಇಲಾಖೆ ಸಿಬ್ಬಂದಿ ಮಂಜುನಾಥ, ಸಿಂಧು, ಮುಖಂಡ ಶಿವು, ಪ್ರದೀಪ್, ಶಿವಶಂಕರ್, ಆಶಾ ಕಾರ್ಯಕರ್ತೆಯರು ಹಾಜರಿದ್ದರು.
20 ಎಂಎಲ್ವಿ 1: ಮಳವಳ್ಳಿ ತಾಲೂಕಿನ ರಾಗಿಬೊಮ್ಮನಹಳ್ಳಿಯಲ್ಲಿ ಡೆಂಘೆ ಜ್ವರ ಹರಡುವುದನ್ನು ತಡೆಗಟ್ಟಲು ಶನಿವಾರ ಗ್ರಾಪಂ ಮತ್ತು ಆರೋಗ್ಯ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಜಾಗೃತಿ ಜಾತ ಕಾರ್ಯಕ್ರಮ ನಡೆಯಿತ್ತು.