ಪ್ರತಿನಿಧಿ ವರದಿ ನಾಪೋಕ್ಲು
ಜಿಲ್ಲಾ ಆಯುಷ್ ಇಲಾಖೆ ಮತ್ತು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಸಂಪಾಜೆ ಸಹಯೋಗದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ 10 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವಭಾವಿಯಾಗಿ ಯೋಗೋತ್ಸವ ಕಾರ್ಯಕ್ರಮ ನಡೆಯಿತು.
ನಾಪೋಕ್ಲು ಗ್ರಾಮ ಪಂಚಾಯತಿ ವ್ಯಾಪ್ತಿಯ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರೌಢ ಮತ್ತು ಪ್ರಾಥಮಿಕ ವಿಭಾಗ, ಶ್ರೀ ರಾಮ ಟ್ರಸ್ಟ್, ಅಂಕುರ್ ಪಬ್ಲಿಕ್ ಶಾಲೆ, ಎಕ್ಸೆಲ್ ಆಂಗ್ಲ ಮಾಧ್ಯಮ ಶಾಲೆ, ಚೆರಿಯಪರಂಬು ಪ್ರಾಥಮಿಕ ಶಾಲೆಯ 150 ಕ್ಕೂ ಅಧಿಕ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ತರಬೇತಿಯನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಸಂಪಾಜೆ ಕಾರ್ಯದರ್ಶಿ ಕೆ.ಬಿ.ಉಷಾರಾಣಿ ನಡೆಸಿಕೊಟ್ಟರು.
ಯೋಗ ಪೋಸ್ಟರ್ ಅನ್ನು ನಾಪೋಕ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್ ಬಿಡುಗಡೆಗೊಳಿಸಿ ಮಾತನಾಡಿ, ಪ್ರತಿಯೊಬ್ಬರು ಜೀವನದಲ್ಲಿ ಯೋಗಾಭ್ಯಾಸವನ್ನು ರೂಡಿಸಿಕೊಳ್ಳಬೇಕು. ಇದರಿಂದ ಉತ್ತಮ ಆರೋಗ್ಯವಂತರಾಗಲು ಸಾಧ್ಯ. ಇಂತಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಶಾಲೆಯ ಪ್ರಭಾರ ಉಪ ಪ್ರಾಂಶುಪಾಲ ಎಂ.ಎಸ್.ಶಿವಣ್ಣ ಮಾತನಾಡಿ, ಪ್ರತಿದಿನ 10 ನಿಮಿಷದ ಯೋಗಾಭ್ಯಾಸದಿಂದ ಮಾನಸಿಕ ಖಿನ್ನತೆ, ಆಯಾಸ ದೂರವಾಗುತ್ತದೆ ಎಂದರು.
ಶಾಲೆಯ ಮೇಲುಸ್ತುವಾರಿ ಸಮಿತಿ ಉಪಾಧ್ಯಕ್ಷ ಕೆ. ಎ. ಹಾರಿಸ್ ಮಾತನಾಡಿ, ಪುರಾತನ ಕಾಲದಿಂದಲೇ ಋಷಿ ಮುನಿಗಳು ಯೋಗಾಭ್ಯಾಸವನ್ನು ಕೊಡುಗೆಯಾಗಿ ನೀಡಿದ್ದಾರೆ. ಇಂದು ಆರೋಗ್ಯ ಕಾಪಾಡಿಕೊಳ್ಳಲು ಅನಿವಾರ್ಯವಾಗಿದೆ. ಆಧುನಿಕ ಯುಗದಲ್ಲಿ ವಾಹನಗಳ ಬಳಕೆ, ತಂತ್ರಜ್ಞಾನದಿಂದ ದೇಹಕ್ಕೆ ವ್ಯಾಯಾಮ ಸಿಗುತ್ತಿಲ್ಲ. ಇದರಿಂದಾಗಿ ಯೋಗಾಭ್ಯಾಸ ಮುಖ್ಯವಾಗಿದೆ. ಕ್ಯಾನ್ಸರ್, ಹೃದಯಾಘಾತ ಸಾಮಾನ್ಯವಾಗಿದ್ದು, ನಿಯಂತ್ರಣಕ್ಕೆ ಯೋಗ ಅಭ್ಯಾಸ ಮಾಡಬೇಕಿದೆ ಎಂದರು ಸಲಹೆ ನೀಡಿದರು.
ಸ್ಥಳೀಯ ಸಂಸ್ಥೆ ಖಜಾಂಜಿ ಬಿ.ಕೆ.ಗಂಗಮ್ಮ, ಗ್ರಾಮ ಪಂಚಾಯಿತಿ ಉಪಾ ಉಪಾಧ್ಯಕ್ಷ ಕುಲ್ಲೇಟೀರ ಹೇಮಾವತಿ ಅರುಣ್, ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಕಿ ಗೈಡ್ ಕ್ಯಾಪ್ಟನ್ ಸರಿತಾ, ಎಕ್ಸೆಲ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಗೈಡ್ ಕ್ಯಾಪ್ಟನ್ ಅಮಿತಾ, ಸ್ಕೌಟ್ ಮಾಸ್ಟರ್ ಸುಕುಮಾರ್, ಮಹೇಶ್ ಇದ್ದರು.
ಫೋಟೋ 16 ಎಂಡಿಕೆ 08 ; ನಾಪೋಕ್ಲು ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಿದ್ದ ಯೋಗೋತ್ಸವದಲ್ಲಿ ಪೋಸ್ಟರ್ ಬಿಡುಗಡೆಗೊಳಿಸಲಾಯಿತು.