ಪ್ರತಿನಿಧಿ ವರದಿ ಮಾಲೂರು
ಅಧಿಕಾರಿಗಳ ನಿರ್ಲಕ್ಷ್ಯದಿಂದ ಗ್ರಾಮಗಳಲ್ಲಿ ಸ್ವಚ್ಛತೆ ಇಲ್ಲದೆ ಸಾಂಕ್ರಾಮಿಕ ರೋಗಗಳು ಹರಡಿ ಆಸ್ಪತ್ರೆಯಲ್ಲಿ ರೋಗಿಗಳ ಸಂಖ್ಯೆ ಹೆಚ್ಚುತ್ತಿದ್ರು ಗ್ರಾಪಂ ಮತ್ತು ಆರೋಗ್ಯಾಧಿಕಾರಗಳು ಕಣ್ಣಿದ್ದು ಕುರುಡರಾಗಿದ್ದಾರೆ.
ತಾಲೂಕಿನ ಪ್ರತಿಯೊಂದು ಗ್ರಾಮದಲ್ಲಿ, ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಸ್ವಚ್ಛತೆ ಮರೀಚಿಕೆ ಯಾಗಿದೆ. ಚರಂಡಿಗಳಲ್ಲಿ ಹೂಳು ತುಂಬಿ, ಗಬ್ಬು ನಾರಿ ನೊಣಗಳು ಹೆಚ್ಚಗಿದೆ. ಗ್ರಾಮಗಳಲ್ಲಿ ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಇಷ್ಟಾದರು ಗ್ರಾಪಂ ಅಧಿಕಾರಿಗಳು ಮಾತ್ರ ಗಾಢ ನಿದ್ರೆಗೆ ಜಾರಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಆಸ್ಪತ್ರೆಯಲ್ಲಿ ರೋಗಿಗಳ ಸಂಖ್ಯೆ ಹೆಚ್ಚುತ್ತಿದೆ ಡೆಂಘೆ ಜ್ವರ, ಮತ್ತು ಇನ್ನೂ ಜೀವಕ್ಕೆ ಮಾರಕವಾದ ರೋಗಿಗಳು ಹೆಚ್ಚು ಕಂಡು ಬರುತ್ತಿದೆ. ರೋಗಿಗಳು ನಿತ್ಯ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಅಲೆದಾಡುತ್ತಿದ್ದಾರೆ. ಅಲ್ಲದೆ ತಾಲೂಕು ಆರೋಗ್ಯಾಧಿಕಾರಗಳು ಗ್ರಾಮಗಳಿಗೆ ಭೇಟಿ ನೀಡಿ ಸಾಂಕ್ರಾಮಿಕ ರೋಗ ಹರಡದಂತೆ ಅರಿವು ಸಹ ಮೂಡಿಸುತ್ತಿಲ್ಲ.
ಇನ್ನೂ ಪುರಸಭೆ ಸೇರಿದಂತೆ ತಾಲೂಕಿನಲ್ಲಿರುವ 28 ಗ್ರಾಪಂಗಳ ವ್ಯಾಪ್ತಿಯಲ್ಲಿ ಬರುವ ಎಲ್ಲ ಹಳ್ಳಿಗಳಲ್ಲಿ ಮೂಲ ಸೌಕರ್ಯ ಮರೀಚಿಕೆ ಯಾಗಿದ್ದು, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ನೆಪಕ್ಕೆ ಮಾತ್ರ ಹಣ ವ್ಯಯ ಮಾಡಿ ಭ್ರಷ್ಟಾಚಾರದಲ್ಲಿ ತೊಡಗಿದರೂ, ತಾಪಂ ಕಾರ್ಯ ನಿರ್ವಹಣಾಧಿಕಾರಿ ಮೌನವಹಿಸಿ ಯಾವುದೇ ಕ್ರಮ ತೆಗೆದುಕೊಂಡಿಲ್ಲ.
ಇನ್ನಾದರೂ ಪುರಸಭೆ ಮತ್ತು ಗ್ರಾಪಂ ಅಧಿಕಾರಿಗಳು ಆರೋಗ್ಯದ ದೃಷ್ಟಿಯಿಂದ ಗ್ರಾಮಗಳಲ್ಲಿ ಸ್ವಚ್ಛತೆ ಕಾರ್ಯಕ್ಕೆ ಮುಂದಾಗ್ತಾರ ಕಾದು ನೋಡಬೇಕಾಗಿದೆ.