ಅರಣ್ಯ ಪ್ರದೇಶಕ್ಕೆ ಅಕ್ರಮವಾಗಿ ಪ್ರವೇಶಿಸಿ ವನ್ಯ ಜೀವಿ ಬೇಟೆಗೆ ಯತ್ನಿಸುತ್ತಿದ್ದ ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ. ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯ ಹುಣಸೂರು ಆನೆಚೌಕೂರು ಬಳಿ ಘಟನೆ ನಡೆದಿದ್ದು, ಬಂಧಿತ ವ್ಯಕ್ತಿಯಿಂದ ಬೇಟೆಗೆ ಬಳಸಲಾಗಿದ್ದ ಒಂಟಿ ನಳಿಕೆ ಬಂದೂಕು, ಜೀವಂತ ಕಾಡತೂಸುಗಳು, ಮೊಬೈಲ್ ಟಾರ್ಚರ್ ನ್ನು ವಶಕ್ಕೆ ಪಡೆಯಲಾಗಿದೆ.
ಚೌತಿ ಗ್ರಾಮದ ಸಂಪತ್ ಕುಮಾರ್ ಬಂಧಿತ ವ್ಯಕ್ತಿ. ನಾಲ್ವರು ಮಂದಿ ಸೇರಿ ವನ್ಯ ಜೀವಿ ಬೇಟೆಯಾಡಲು ಅರಣ್ಯ ಪ್ರದೇಶಕ್ಕೆ ಅಕ್ರಮವಾಗಿ ಪ್ರವೇಶ ಮಾಡಿದ್ದರು. ಈ ವೇಳೆ ಸಂಪತ್ ಕುಮಾರ್ ನ್ನು ಬಂಧಿಸಲಾಗಿದ್ದು, ಮೂವರು ಪರಾರಿಯಾಗಿದ್ದಾರೆ. ಪಿರಿಯಾಪಟ್ಟಣ ತಾಲ್ಲೂಕಿನ ಹೊಸೂರುಮಾಳ ಗ್ರಾಮದ ರವೀಂದ್ರ, ಚೌತಿ ಗ್ರಾಮದ ಪವನ್, ಮಹೇಶ್ ತಲೆ ಮರೆಸಿಕೊಂಡಿರುವ ವ್ಯಕ್ತಿಗಳಾಗಿದ್ದಾರೆ.
ಈ ಮೂವರು ಆರೋಪಿಗಳ ಬಂಧನಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಬಲೆ ಬೀಸಿದ್ದಾರೆ.