ಪ್ರತಿನಿಧಿ ವರದಿ ಸಕಲೇಶಪುರ
ತಾಲೂಕಿನ ವಡೂರು ಗ್ರಾಮದಲ್ಲಿ ವ್ಯಕ್ತಿ ಮೇಲೆ ಕಾಡಾನೆ ದಾಳಿ ಮಾಡಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ.
ಗ್ರಾಮದ ಮಹೇಶ್(47) ಗಾಯಗೊಂಡ ವ್ಯಕ್ತಿ. ಸೋಮವಾರ ಸಂಜೆ ಮನೆಯಿಂದ ಸ್ವಲ್ಪ ದೂರದಲ್ಲಿ ಸಾಮಗ್ರಿ ತರಲು ಅಂಗಡಿಗೆ ತೆರಳುತ್ತಿದ್ದ ವೇಳೆ ಏಕಾಏಕಿ ಕಾಡಾನೆ ದಾಳಿ ಮಾಡಿದೆ. ಈ ವೇಳೆ ಮಹೇಶ್ ಕಿರುಚಾಟ ಕೇಳಿ ಗ್ರಾಮಸ್ಥರು ಕೂಡಲೇ ಆಗಮಿಸಿದ್ದರಿಂದ ಕಾಡಾನೆ ಕಾಫಿ ತೋಟದೊಳಗೆ ಓಡಿ ಹೋಗಿದೆ. ಗಾಯಾಳು ಮಹೇಶ್ಗೆ ಸಕಲೇಶಪುರದ ಕ್ರಾಫರ್ಡ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.