ಮಂಡ್ಯ : ತಮಿಳುನಾಡಿಗೆ ನಿತ್ಯ 5 ಸಾವಿರ ಕ್ಯುಸೆಕ್ ನೀರು ಹರಿಸಬೇಕೆಂಬ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹಾಗೂ ಸುಪ್ರೀಂ ಕೋರ್ಟ್ ಆದೇಶ ಖಂಡಿಸಿ ಮಂಡ್ಯ ಜಿಲ್ಲಾ ಹಿತರಕ್ಷಣಾ ಸಮಿತಿ ಸೇರಿ ವಿವಿಧ ಸಂಘಟನೆಗಳು ಕರೆ ನೀಡಿದ್ದ ಮಂಡ್ಯ ನಗರ, ಮದ್ದೂರು ತಾಲೂಕು ಬಂದ್ ಬಂದ್ಗೆ ಶನಿವಾರ ವ್ಯಾಪಕ ಬೆಂಬಲ ವ್ಯಕ್ತವಾಯಿತು. ಪ್ರತಿಭಟನೆ, ರಸ್ತೆ ತಡೆಗಳ ಹೊರತಾಗಿಯೂ ಬಂದ್ ಸಂಪೂರ್ಣ ಶಾಂತಿಯುತವಾಗಿತ್ತು. ವರ್ತಕರು, ವ್ಯಾಪಾರಿಗಳು ಹಾಗೂ ವಾಣಿಜ್ಯೋದ್ಯಮಿಗಳು ಬಂದ್ಗೆ ಪೂರ್ಣ ಬೆಂಬಲ ಘೋಷಿಸಿದ್ದ ಹಿನ್ನೆಲೆಯಲ್ಲಿ ವಾಣಿಜ್ಯ ಮತ್ತು ವ್ಯಾಪಾರ ಬಹುತೇಕ ಸ್ಥಗಿತಗೊಂಡಿತ್ತು.