ಮೈಸೂರಿನಲ್ಲಿ ನಿನ್ನೆ(ಬುಧವಾರ) ಗಣಪತಿ ಮೂರ್ತಿಗಳ ಸಾಮೂಹಿಕ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಮೈಸೂರು ಅರಮನೆಯ ಕೋಟೆ ಆಂಜನೇಯಸ್ವಾಮಿ ದೇಗುಲದ ಬಳಿಯಿಂದ ಆರಂಭವಾದ ಮೆರವಣಿಗೆಯು
ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿತು. ಮೈಸೂರಿನ ವಿವಿಧೆಡೆಗಳಿಂದ ಬಂದಿದ್ದ ಗಣಪತಿ ಮೂರ್ತಿಗಳು ಮೆರವಣಿಗೆಯಲ್ಲಿ ಭಾಗಿಯಾಗಿದ್ದು, ನೋಡುಗರು ವಿವಿಧ ಶೈಲಿಯ ಗಣಪತಿ ಮೂರ್ತಿಗಳ ಕಂಡು ಸಂತಸಪಟ್ಟರು.
ನಗರದಾದ್ಯಂತ ಪ್ರತಿಷ್ಠಾಪಿಸಲಾಗಿದ್ದ ತರಹೇವಾರಿ ಗಣಪತಿ ಮೂರ್ತಿಗಳು ಮೆರವಣಿಗೆಯಲ್ಲಿ ಭಾಗಿಯಾಗಿದ್ದವು. ಮೆರವಣಿಗೆಯಲ್ಲಿ ಯುವಜನತೆ ತಮಟಿ ಸದ್ದಿಗೆ ಕುಣಿದು ಕುಪ್ಪಳಿಸಿದರಲ್ಲದೆ, ಡಿಜೆ ಸದ್ದಿಗೆ ಯುವಕರು ಹುಚ್ಚೆದ್ದು ಕುಣಿದು ಸಂಭ್ರಮಿಸಿದರು.
ಮೆರವಣಿಗೆಯಲ್ಲಿ ಶಾಸಕ ಶ್ರೀವತ್ಸ ಕೂಡ ಭಾಗಿಯಾಗುವ ಮೂಲಕ ಯುವಕರಿಗೆ ಸಾಥ್ ನೀಡಿದರು.