ಚಿಕ್ಕಮಗಳೂರು : ಜಿಲ್ಲೆಯಲ್ಲಿ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗೋಪಾಲಕೃಷ್ಣ ತಿಳಿಸಿದರು.
ನಗರದಲ್ಲಿ ಮಂಗಳವಾರ ಮಾತನಾಡಿದ ಆವರು, ಈಗಾಗಲೇ ನಾವು ತರೀಕೆರೆ, ಕಡೂರು ತಾಲೂಕುಗಳ ಕೆಲ ಗ್ರಾಮಗಳಿಗೆ ಭೇಟಿ ನೀಡಿ ಈ ಬಗ್ಗೆ ಪರಿಶೀಲನೆ ನಡೆಸಿದ್ದು, ಗ್ರಾಮಗಳಲ್ಲಿರುವ ಗೋ ಕಟ್ಟೆಗಳಿಗೆ ಮತ್ತು ಧನ ಕರುಗಳು ಕುಡಿಯುವ ನೀರಿನ ಆಸರೆಗಳಿಗೆ ನೀರು ತುಂಬಿಸಲು ಪಶು ಸಂಗೋಪನಾ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ. ಅದೇ ರೀತಿ ಜಿಲ್ಲೆಯಲ್ಲಿ ಮೇವಿನ ಲಭ್ಯತೆ ಕೂಡ ಸಾಕಷ್ಟು ಇದ್ದು, ಇನ್ನು 23 ವಾರಕ್ಕೆ ಆಗುವಷ್ಟು ಮೇವಿನ ದಾಸ್ತಾನು ಇರಿಸಲಾಗಿದೆ ಎಂದು ತಿಳಿಸಿದರು.