ಹಾಸನಾಂಬೆ ದರ್ಶನಕ್ಕೆ ಸಾಲಿನಲ್ಲಿ ನಿಂತಿದ್ದ ಭಕ್ತರಿಗೆ ಕರೆಂಟ್ ಶಾಕ್ ವಿಚಾರ ಸಂಬಂಧ ಕರೆಂಟ್ ಶಾಕ್ನಿಂದ ಅಸ್ವಸ್ಥರಾಗಿದ್ದ 20 ಭಕ್ತರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಐವರು ಭಕ್ತರು ಚಿಕಿತ್ಸೆ ಪಡೆದು ಮಧ್ಯಾಹ್ನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸಂಜೆ 13 ಭಕ್ತರು ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮತ್ತಿಬ್ಬರು ಗಾಯಾಳುಗಳಿಗೆ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಹಕಾರ & ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಕೆ.ಎನ್.ರಾಜಣ್ಣ ಆಸ್ಪತ್ರೆಗೆ ತೆರಳಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ್ದಾರೆ. ಎಲ್ಲರಿಗೂ ಊಟ ಮಾಡಿಸಿ, ದೇವಿ ದರ್ಶನ ಮಾಡಿಸಿ ಎಂದು ಸೂಚನೆ ನೀಡಿದ್ದಾರೆ.