ಬೆಂಗಳೂರು, ಜ.02: ರಾಜ್ಯ ಸರ್ಕಾರದಿಂದ ಯಾವುದೇ ಮದ್ಯದ ದರ ಏರಿಕೆ ಮಾಡಿಲ್ಲ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು ‘ಮದ್ಯ ಉತ್ಪಾದಕರು ದರ ಹೆಚ್ಚಳ ಮಾಡಿರಬಹುದು. ಆದರೆ, ನಾವಂತೂ ಹೆಚ್ಚಿಸಿಲ್ಲ. ಅಬಕಾರಿ ಶುಲ್ಕ ಹೆಚ್ಚಳ ಮಾಡೋದಾದರೆ ಮೊದಲೇ ಹೇಳುತ್ತೇವೆ. ಇನ್ನು ಬಜೆಟ್ನಲ್ಲೂ ಸದ್ಯ ತೆರಿಗೆ ಹೆಚ್ಚಳದ ಬಗ್ಗೆ ಪ್ರಸ್ತಾಪ ಮಾಡಿಲ್ಲ. ಯಾವುದೇ ಟಾರ್ಗೆಟ್ ಕೂಡ ನೀಡಿಲ್ಲ, ಆದರೆ, ಆದಾಯ ಸಂಗ್ರಹದ ಗುರಿ ಇದೆ ಎನ್ನುವ ಮೂಲಕ ಊಹಾಪೋಹಗಳಿಗೆ ತೆರೆಎಳೆದಿದ್ದಾರೆ.ಈ ಹಿಂದೆ 17% ರಷ್ಟು ಎಲ್ಲಾ ಮಾದರಿಯ ಮಧ್ಯದ ಮೇಲಿನ ದರ ಏರಿಕೆ ಮಾಡಲಾಗಿತ್ತು. ಈಗ ಮತ್ತೊಮ್ಮೆ ರಾಜ್ಯಾದ್ಯಂತ ಬಡವರು ಹೆಚ್ಚಾಗಿ ಕುಡಿಯುವ ಮೂರು ಹಾಟ್ ಫೇವರೆಟ್ ಬ್ರ್ಯಾಂಡ್ಗಳ ದರ ಹೆಚ್ಚಳ ಮಾಡಲಾಗಿದೆ. ಜೊತೆಗೆ ಮದ್ಯ ಉತ್ವಾದಕ ಕಂಪನಿಗಳು ಕ್ವಾಟರ್ಗೆ 20 ರಿಂದ ಮೂವತ್ತು ರೂಪಾಯಿ ಏರಿಸಿವೆ ಎನ್ನಲಾಗಿತ್ತು. ಇದಕ್ಕೆ ಅಬಕಾರಿ ಸಚಿವ ಆರ್ಬಿ ತಿಮ್ಮಾಪುರ ಸ್ಪಷ್ಟನೆ ನೀಡಿದರು.