ನಂದಿ ಗಿರಿಧಾಮಕ್ಕೆ ಸಂಬಂಧಪಟ್ಟಂತೆ ಎಸಿಎಸ್ ಅವರ ಸಮ್ಮುಖದಲ್ಲಿ ಈಗಾಗಲೇ ಸಮಿತಿ ರೋಪ್ ವೇ ಸಂಬಂಧ ಇರುವ ಸಮಸ್ಯೆಗಳನ್ನು ಪರಿಹರಿಸಲು ನಮ್ಮ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದರು.
ಸೋಮವಾರ ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಡೆದ 154ನೇ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಕಡತ ತೋಟಗಾರಿಕೆ ಇಲಾಖೆ ಬಳಿಯಿದೆ. ಸಂಬಂದಪಟ್ಟ ಮಂತ್ರಿಗಳ ಜತೆ ಮಾತನಾಡಿದ್ದೇನೆ. ಭೂಮಿ ಹಸ್ತಾಂತರ, ಬೆಟ್ಟದ ಬುಡದಲ್ಲಿ ರೋಪ್ ವೇ ಗೆ ಬೇಕಾದ ಕಾಮಗಾರಿಯ 17ರಿಂದ 18 ಸ್ತಂಭಗಳ ನಿರ್ಮಾಣ ಅರಣ್ಯ ಇಲಾಖೆಯ ಅನುಮತಿ ಬೇಕಿದ್ದು, ಅದನ್ನು ಪಡೆಯಲು ಸೂಚನೆ ನೀಡಲಾಗಿದೆ ಎಂದು ಸಚಿವರು ಹೇಳಿದರು.
ನಂದಿಬೆಟ್ಟದಲ್ಲಿ ಸಭೆ: ನಂದಿಬೆಟ್ಟದಲ್ಲಿ ಶೀಘ್ರವೇ ಪ್ರವಾಸೋಧ್ಯಮ ಸಚಿವರ ಸಮ್ಮುಖದಲ್ಲಿ ಸಭೆ ನಡೆಸಲಾಗುವುದು.ಅಲ್ಲಿ ಅಭಿವೃದ್ದಿ, ಆಗಬೇಕಾದ ಕಾರ್ಯ, ಸಂಚಾರಿ ದಟ್ಟಣೆ, ಇದರ ಪರಿಹಾರೋಪಾಯಗಳು ಎಲ್ಲಾ ವಿಚಾರಗಳ ಬಗ್ಗೆ ಸಮಗ್ರವಾಗಿ ಚರ್ಚಿಸಿ ಪರಿಹಾರೋಪಾಯಗಳನ್ನು ಕೈಗೊಳ್ಳಲಾಗುವುದು ಎಂದರು. ಶ್ಯಾಮನೂರು ಶಿವಶಂಕರಪ್ಪ ನಮ್ಮ ಪಕ್ಷದ ಹಿರಿಯ ನಾಯಕರು.ಇವರು ಯಾಕೆ ಹಾಗೆ ಹೇಳಿದ್ದಾರೋ ನನಗೆ ತಿಳಿಯದು. ಹಿರಿಯರ ಬಗ್ಗೆ ಹಿರಿಯರೇ ಮಾತನಾಡುತ್ತಾರೆ. ನನಗೆ ಆ ಬಗ್ಗೆ ಮಾಹಿತಿಯಿಲ್ಲ ಎಂದರು.