ಮಂಡ್ಯ: ಜಿಲ್ಲೆಯ ಸ್ವರ್ಣಸಂದ್ರ ಬಡಾವಣೆಯಲ್ಲಿ ಹಳೇ ದ್ವೇಷದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಯುವಕನೊಬ್ಬನನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ಕಳೆದ ಮಧ್ಯ ರಾತ್ರಿ ನಡೆದಿದೆ.
ಅಕ್ಷಯ್ (24) ಹತ್ಯೆಯಾದ ಯುವಕ. ಆತನ ಸ್ನೇಹಿತ ಹೇಮಂತ ಗಂಭೀರವಾಗಿ ಗಾಯಗೊಂಡಿದ್ದು,ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಳೆದ ವರ್ಷ ಚೀಟಿ ವ್ಯವಹಾರದ ಹಿನ್ನಲೆಯಲ್ಲಿ ಅಕ್ಷಯ್ ಹಾಗೂ ಆತನ ಸ್ನೇಹಿತನ ಮಧ್ಯೆ ಗಲಾಟೆ ನಡೆದಿತ್ತು.
ಆ ಸಂದರ್ಭದಲ್ಲಿ ಅಕ್ಷಯ್ ಆತನ ಸ್ನೇಹಿತನ ಮೇಲೆ ಹಲ್ಲೆ ನಡೆಸಿದ್ದ.ಈ ದ್ವೇಷದ ಹಿನ್ನಲೆಯಲ್ಲಿ ಮೂರ್ನಾಲ್ಕು ಮಂದಿ ದುಷ್ಕರ್ಮಿಗಳು ಅಕ್ಷಯನನ್ನು ಕೊಲೆ ಮಾಡಿದ್ದಾರೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.
ಕಳೆದ ರಾತ್ರಿ ಅಕ್ಷಯನನ್ನು ಫೋನ್ ಮಾಡಿ ದುಷ್ಕರ್ಮಿಗಳು ಕರೆಸಿಕೊಂಡಿದ್ದಾರೆ. ಸ್ವರ್ಣಸಂದ್ರದ ಬಡಾವಣೆಯ ಅರಳಿಕಟ್ಟೆ ಮುಂಭಾಗ ಅಕ್ಷಯ್ ಹಾಗೂ ಆತನ ಸ್ನೇಹಿತ ಹೇಮಂತನ ಮೇಲೆ ಮಚ್ಚು ಲಾಂಗ್ ಗಳಿಂದ ಹಲ್ಲೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಅಕ್ಷಯ್ ಸ್ಥಳದಲ್ಲಿಯೇ ಮೃತಪಟ್ಟರೆ,ಹೇಮಂತ ಗಂಭೀರವಾಗಿ ಗಾಯ ಗೊಂಡಿದ್ದಾನೆ.
ಕಳೆದ ವರ್ಷ ಚೀಟಿ ವ್ಯವಹಾರದ ಹಿನ್ನೆಲೆಯಲ್ಲಿ ಅಕ್ಷಯ್ ದುಷ್ಕರ್ಮಿಗಳ ಮಧ್ಯೆ ಈ ಹಿಂದೆ ಗಲಾಟೆ ನಡೆದಿತ್ತು. ಈ ಸಂದರ್ಭದಲ್ಲಿ ಅಕ್ಷಯ್ ದುಷ್ಕರ್ಮಿಗಳಿಗೆ ಹೊಡೆದಿದ್ದ. ಈ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ನಡೆದಿದೆ ಎಂದು ಪೋಲಿಸರ ಪ್ರಾಥಮಿಕ ವರದಿಯಿಂದ ತಿಳಿದುಬಂದಿದೆ
ಸ್ಥಳಕ್ಕೆ ಮಂಡ್ಯ ಪೂರ್ವ ಠಾಣೆಯ ಸಬ್ ಇನ್ಸ್ಪೆಕ್ಟರ್ ಶೇಷಾದ್ರಿ ಕುಮಾರ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಕ್ಷಯ್ ಕೊಲೆ ಮಾಡಿರುವ ದುಷ್ಟರ್ಮಿಗಳ ಪತ್ತೆಗಾಗಿ ಮುಂದಿನ ಕ್ರಮ ಕೈಗೊಂಡಿದ್ದಾರೆ.