ಕಾವೇರಿ ನದಿ ನೀರು ಹೋರಾಟದಲ್ಲಿ ನಟರು ಭಾಗಿಯಾಗದ ಆರೋಪ ಸಂಬಂಧ ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದರು. ಹೋರಾಟದಲ್ಲಿ ಭಾಗಿಯಾಗದ ನಟರ ಸಿನಿಮಾಗಳನ್ನು ಬಹಿಷ್ಕರಿಸಬೇಕು. ಕನ್ನಡ ಚಿತ್ರರಂಗದ ಮೂಲಕ ಹಣ ಮಾಡಿಕೊಂಡಿದ್ದಾರೆ, ಹೊರಬರಲಿ. ನಟ, ನಟಿಯರ ಮನೆಗೆ ಹೋಗಿ ಆರತಿ ತಟ್ಟೆ ಎತ್ತಿ ಕರೆಯೋಕೆ ಆಗಲ್ಲ. ಕಾವೇರಿ ನೀರಿನ ಹೋರಾಟದಲ್ಲಿ ಸ್ವಯಂಪ್ರೇರಿತವಾಗಿ ಭಾಗಿಯಾಗಲಿ. ಕಾವೇರಿ ತೀರದ ಭಾಗದವರೇ ಹೆಚ್ಚಿನವರು ಕನ್ನಡ ಚಿತ್ರರಂಗದಲ್ಲಿದ್ದಾರೆ. ಉತ್ತರ ಕರ್ನಾಟಕ ಭಾಗದವರಿಗೆ ಕೇವಲ ಹಾಸ್ಯ ಪಾತ್ರ ಕೊಡುತ್ತಾರೆ ಎಂದು ವಾಗ್ದಾಳಿ ನಡೆಸಿದರು.