ಮಡಿಕೇರಿ: ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಸಂಪಾಜೆಯ ಚಡಾವು ಸ್ವಾಮಿ ಕೊರಗಜ್ಜ ದೇವಸ್ಥಾನಕ್ಕೆ ಭೇಟಿ ನೀಡಿದರು.
ವಿಶೇಷ ಪ್ರಾರ್ಥನೆ ಸಲ್ಲಿಸಿದ ಅವರು ನಾಡಿನ ಜನತೆಗೆ ಒಳಿತಾಗಲಿ ಎಂದು ಕೋರಿದರು. ಇದೇ ಸಂದರ್ಭ ಕೊಯನಾಡಿನ ಸುನ್ನಿ ಮುಸ್ಲಿಂ ಜುಮಾ ಮಸೀದಿಗೆ ಶಾಸಕರು ಭೇಟಿ ನೀಡಿದರು. ಮಸೀದಿ ಹಾಗೂ ನುಸ್ರತುಲ್ ಇಸ್ಲಾಂ ಅಸೋಸಿಯೇಷನ್ ಕೊಯನಾಡು ವತಿಯಿಂದ ಪೊನ್ನಣ್ಣ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಸೂರಜ್ ಹೊಸೂರು, ಪ್ರಮುಖರಾದ ಸುರೇಶ್ ಸಂಪಾಜೆ, ಹನೀಫ್ ಕೊಯನಾಡು, ಇಸ್ಮಾಯಿಲ್, ಲವ ಚಿಣ್ಣಪ್ಪ, ಸಂಪನ್ನ ಅಯ್ಯಪ್ಪ ಮತ್ತಿತರರು ಉಪಸ್ಥಿತರಿದ್ದರು.
ಫೋಟೋ :: ಪೊನ್ನಣ್ಣ