- ಚಾ.ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಬಾಲರಾಜು ಅಭಿಪ್ರಾಯ । ಗುಂಡ್ಲುಪೇಟೆ ಭಾಗದಲ್ಲಿ ಮತಯಾಚನೆ
ಪ್ರತಿನಿಧಿ ವರದಿ ಗುಂಡ್ಲುಪೇಟೆ
ವಿಕಸಿತ ಭಾರತದ ನಿರ್ಮಾಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ದೇಶದ ಪ್ರಧಾನಿಯಾಗಬೇಕು ಎಂದು ಜನ ಬಯಸುತ್ತಿದ್ದಾರೆ ಎಂದು ಚಾ.ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಬಾಲರಾಜು ಹೇಳಿದರು.
ತಾಲೂಕಿನ ಬೇಗೂರು, ಬರಗಿ, ಹಂಗಳ, ತೆರಕಣಾಂಬಿ, ಮಹಾ ಶಕ್ತಿ ಕೇಂದ್ರದಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆ ನಡೆದ ಬಿಜೆಪಿ ಮತಯಾಚನೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಹಿಂದೆ ಶಾಸಕರಾಗಿದ್ದ ಸಿ.ಎಸ್.ನಿರಂಜನಕುಮಾರ್ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದು, ಕ್ಷೇತ್ರದಲ್ಲಿ ಬಿಜೆಪಿ ಪ್ರಬಲವಾಗಿದೆ. ಆದ್ದರಿಂದ, ಈ ಬಾರಿ ನನಗೂ ಒಂದು ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು.
ಕಳೆದ 30 ವರ್ಷಗಳಿಂದ ರಾಜಕಾರಣ ಮಾಡಿಕೊಂಡು ಬಂದಿದ್ದು, ಯಾವುದೇ ಭ್ರಷ್ಟಾಚಾರಕ್ಕೆ ಅವಕಾಶ ಮಾಡಿಕೊಡದೆ ಜನರ ಸೇವೆಯನ್ನ ಮಾಡಿಕೊಂಡು ಬಂದಿದ್ದೇನೆ. ಶಿಕ್ಷಣ, ಆರೋಗ್ಯ, ನೀರಾವರಿ ಮುಂತಾದ ಕ್ಷೇತ್ರಗಳಲ್ಲಿ ಪಕ್ಷಾತೀತವಾಗಿ ಕೆಲಸ ಮಾಡಿದ್ದೇನೆ. ಯಡಿಯೂರಪ್ಪ ಅವರು ನನಗೆ ಅವಕಾಶ ಮಾಡಿ ಕೊಟ್ಟ ಕಾರಣ ಟಿಕೆಟ್ ಸಿಕ್ಕಿದೆ. ಆದ್ದರಿಂದ, ಸಾಮಾನ್ಯರಲ್ಲಿ ಸಾಮಾನ್ಯನಾಗಿ ಜನ ಸೇವೆ ಮಾಡಲು ಅವಕಾಶ ಕಲ್ಪಿಸಿ ಕೊಡಬೇಕು ಎಂದರು.
ನಾನು 1991-92 ರಲ್ಲಿ ರಾಜಕೀಯ ಪ್ರವೇಶ ಮಾಡಿದೆ. ನನಗೆ ಸೇವೆ ಮಾಡುವುದು ಬಿಟ್ಟರೆ ಬೇರೇನು ಗೊತ್ತಿಲ್ಲ. ನಾನು ಸ್ವತಂತ್ರ ಅಭ್ಯರ್ಥಿಯಾಗಿ ಕೊಳ್ಳೇಗಾಲ ಕ್ಷೇತ್ರದಿಂದ ಸ್ಪರ್ಧಿಸಿ ಶಾಸಕನಾಗಿ ಉತ್ತಮ ಸೇವೆ ಸಲ್ಲಿಸಿದ್ದೇನೆ. ರಾಜಕೀಯವಾಗಿ ರಾಜಕೀಯ ಜೀವನದಲ್ಲಿ ಅನೇಕ ಏರುಪೇರುಗಳನ್ನು ಸೋಲು ಗೆಲುವುಗಳನ್ನು ಕಂಡಿದ್ದೇನೆ, ಅನುಭವಿಸಿದ್ದೇನೆ. ಹಾಗಾಗಿ, ಪಕ್ಷದ ಹಿರಿಯರಾದ ಯಡಿಯೂರಪ್ಪ ಅವರು ನನ್ನನ್ನು ಗುರುತಿಸಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಟಿಕೇಟ್ ನೀಡುವ ಮೂಲಕ ನನ್ನ ಮೇಲೆ ಭರವಸೆ ಹೊಂದಿದ್ದಾರೆ.
ನಂತರ ಮಾತನಾಡಿದ ಜಿಲ್ಲಾ ಬಿಜೆಪಿ ಅಧ್ಯಕ್ಷ ಹಾಗೂ ಮಾಜಿ ಶಾಸಕ ಸಿಎಸ್ ನಿರಂಜನ್ ಕುಮಾರ್ ಮಾತನಾಡಿದರು. ತಾಲೂಕು ಮಂಡಳಿ ಅಧ್ಯಕ್ಷ ಮಹಾದೇವ ಪ್ರಸಾದ್, ಪಿ.ಎಲ್.ಬಿ ಬ್ಯಾಂಕ್ ಅಧ್ಯಕ್ಷ ಚೆನ್ನಮ್ಮಲ್ಲಿಪುರ ಬಸವಣ್ಣ, ಕೇಂದ್ರ ಬರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ರಾಮಚಂದ್ರು, ಪಿ.ಎಲ್.ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಹರಿಯಾಲ ಮಹೇಶ್ ಪುರಸಭಾ ಮಾಜಿ ಅಧ್ಯಕ್ಷ ಎಲ್.ಸುರೇಶ್, ಕನ್ನೆಗಾಲ ಸ್ವಾಮಿ, ಕಮರಳ್ಳಿ ರವಿ, ಶಿಂಡನಪುರ ಮಂಜುನಾಥ್, ನವೀನ್ ಮೌರ್ಯ, ಮಹೇಶ್, ಮುಂತಾದವರು ಹಾಜರಿದ್ದರು.
ಫೋಟೋ ಇದೆ