ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರಿಂದ ದೇಶಾದ್ಯಂತ ರೈಲ್ವೆ ಕಾಮಗಾರಿಗಳ ಉದ್ಘಾಟನೆ ಮಾಡುತ್ತಿದ್ದು, ಮೈಸೂರಿನಲ್ಲೂ ವಿಡಿಯೋ ಕಾನ್ಫಿರೆನ್ಸ್ ಮೂಲಕ ನೈರುತ್ಯ ರೈಲ್ವೆ ವಿಭಾಗದ ದಡದಹಳ್ಳಿ ಕೆಳ ಸೇತುವೆ ಉದ್ಘಾಟನೆಯಾಗಿದ್ದು, ಸಂಸದ ಪ್ರತಾಪ್ ಸಿಂಹ ಅವರು ಲೋಕಾರ್ಪಣೆ ಮಾಡಿದ್ದಾರೆ. ಅಶೋಕಪುರಂ ಮತ್ತು ಕಡಕೊಳ ರೈಲು ನಿಲ್ದಾಣಗಳ ನಡುವೆ ಅಂಡರ್ ಪಾಸ್ ನಿರ್ಮಾಣವಾಗಿದೆ. ಈ ವೇಳೆ ರೈಲ್ವೆ ವಿಭಾಗೀಯ ಎಂಜಿನಿಯರ್ ರವಿಚಂದ್ರನ್, ಬಿಜೆಪಿ ಮುಖಂಡರಾದ ಎಲ್.ಆರ್. ಮಹದೇವಸ್ವಾಮಿ, ಗಿರಿಧರ್, ಜಯಪ್ರಕಾಶ್, ಸ್ಥಳೀಯ ಬಿಜೆಪಿ ಮುಖಂಡರು, ಶಾಲಾ ವಿದ್ಯಾರ್ಥಿಗಳು ಭಾಗಿಯಾಗಿದ್ದರು.