ಸದ್ಯಕ್ಕೆ ಅಯೋಧ್ಯೆ ಯಿಂದ ಬಂದ ಮಂತ್ರಾಕ್ಷತೆಯನ್ನು ಎಲ್ಲ ಭಕ್ತರ ಮನೆಗಳಿಗೆ ಮುಟ್ಟಿಸಲಾಗುತ್ತಿದೆ. ಆದರೆ, ಜ.22ರಂದು ಎಲ್ಲರಿಗೂ ಅಯೋಧ್ಯೆಗೆ ತೆರಳಲು ಅವಕಾಶವಿಲ್ಲ. ಸದ್ಯದ ಮಾಹಿತಿ ಪ್ರಕಾರ ಅತ್ತ ಶ್ರೀರಾಮ ಮೂರ್ತಿಯ ಪ್ರಾಣ ಪ್ರತಿಷ್ಠೆ ಮುಗಿಯುತ್ತಿದ್ದಂತೆ ಇತ್ತ ರೈಲುಗಳ ಸಂಚಾರವೂ ಆರಂಭವಾಗಲಿವೆ. ಹುಬ್ಬಳ್ಳಿ- 3, -2, -2, ಮೈಸೂರು-2 ಸೇರಿದಂತೆ ಬೇರೆ, ಬೇರೆ ಊರುಗಳಿಂದ ಸುಮಾರು 12ಕ್ಕೂ ಹೆಚ್ಚು ರೈಲುಗಳು ಸಂಚರಿಸುವ ಸಾಧ್ಯತೆ ಇದೆ.
ಒಂದು ರೈಲು ಹೋಗಿ ಬಂದ ಬಳಿಕ ಮತ್ತೊಂದು ರೈಲು ಆ ಊರಿನಿಂದ ಹೊರ ಡಲಿದೆ. ಅಯೋಧ್ಯೆಯಲ್ಲಿ ರಶ್ ಆಗಬಾ ರದು ಎಂಬ ಮುಂದಾಲೋಚನೆಯಿಂದ ಈ ರೀತಿಯ ವ್ಯವಸ್ಥೆ ಮಾಡಲಾಗಿದೆ. ಈ ರೈಲುಗಳಿಗೆ ಆನ್ಲೈನ್ನಲ್ಲಿ ಮುಂಗಡ ಟಿಕೆಟ್ ಬುಕ್ ಮಾಡಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಕೌಂಟರ್ ಟಿಕೆಟ್ ಪಡೆಯಲು ಅವಕಾಶ ಇಲ್ಲ. ಎಷ್ಟು ಟಿಕೆಟ್ ಬುಕ್ ಮಾಡುತ್ತಾರೆ ಎಂಬುದನ್ನು ನೋಡಿಕೊಂಡ ಮೇಲೆಯೇ ರೈಲು ಸಂಚರಿಸಲಿವೆಯಂತೆ. ಐಆರ್ಸಿಟಿಸಿಯೇ ಟಿಕೆಟ್ ಬುಕ್ಕಿಂಗ್ನ್ನೆಲ್ಲ ನಿರ್ವಹಿಸಲಿದೆ ಎಂದು ಮೂಲಗಳು ತಿಳಿಸಿವೆ.
ಅಯೋಧ್ಯೆಗೆ ಎಷ್ಟು ರೈಲುಗಳನ್ನು ಬಿಡಬೇಕು ಎಂಬುದನ್ನು ಇನ್ನೂ ಅಂತಿಮಗೊಳಿಸಿಲ್ಲ. ಬೇಡಿಕೆ ಬಂದ ಮೇಲೆ ಇಲಾಖೆ ನಿರ್ಧರಿಸಲಿದೆ. ಇಲಾಖೆಯ ನಿರ್ದೇಶನದ ಮೇಲೆ ಅಂತಿಮಗೊಳಿಸಲಾಗುವುದು ಎಂದು ನೈರುತ್ಯ ರೈಲ್ವೆ ಪಿಆರ್ಓ ಮಂಜುನಾಥ ಕನಮಡಿ ತಿಳಿಸಿದ್ದಾರೆ.