ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಕೆಲವು ನಿರ್ಣಯ ಕೈಗೊಂಡಿರುವ ಹಿನ್ನೆಲೆ ಪ್ರಾಧಿಕಾರದ ಅಧ್ಯಕ್ಷರಾದ ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಸಂಸದ ಯದುವೀರ್ ಒಡೆಯರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಶ್ರೀ ಚಾಮುಂಡೇಶ್ವರಿ ದೇವಾಲಯದ ಪ್ರಾಧಿಕಾರದ ವಿಚಾರವಾಗಿ ಈಗಾಗಲೇ ಕೋರ್ಟ್ನಿಂದ ತಡೆಯಾಜ್ಞೆ ಇದ್ದರೂ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಮೊದಲ ಸಭೆ ನಡೆಸಿ ಕೆಲವು ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ. ಕೋರ್ಟ್ನಲ್ಲಿ ತಡೆಯಾಜ್ಞೆ ಇದ್ದರೂ ಸಹ ಸಭೆ ನಡೆಸಿ ನಿರ್ಣಯ ತೆಗೆದುಕೊಂಡಿರುವುದು ಆಕ್ಷೇಪಾರ್ಹ. ಆ ನಿರ್ಣಯಗಳು ಊರ್ಜಿತವಾಗುವುದಿಲ್ಲ ಹೀಗಾಗಿ ನಾವು ಕಾನೂನಾತ್ಮಕ ಹೋರಾಟವನ್ನು ಮುಂದುವರೆಸುತ್ತೇವೆ. ನಮ್ಮ ಮುಂದಿನ ನಡೆ ಏನು ಎಂದು ಶೀಘ್ರದಲ್ಲೇ ತಿಳಿಸುತ್ತೇವೆ ಎಂದು ಸಂಸದ ಯದುವೀರ್ ಒಡೆಯರ್ ಮೈಸೂರಿನಲ್ಲಿ ಹೇಳಿಕೆ ಕೊಟ್ಟಿದ್ದಾರೆ.