ಬೆಂಗಳೂರು: ಆರ್.ಆರ್.ನಗರ ವಿಧಾನಸಭಾ ಕ್ಷೇತ್ರಕ್ಕೆ ಅನುದಾನ ಕೈಬಿಟ್ಟಿರುವ ಹಿನ್ನೆಲೆಯಲ್ಲಿ ಅನುದಾನ ಬಿಡುಗಡೆಗೆ ಆಗ್ರಹಿಸಿ ಬಿಜೆಪಿ ಶಾಸಕ ಮುನಿರತ್ನ ಅವರು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ಮಾಡುತ್ತಿದ್ದಾರೆ. ಮುನಿರತ್ನ ಜೊತೆ ಪ್ರತಿಭಟನೆ ಮಾಡುತ್ತಿದ್ದ ಎಲ್ಲ ಪ್ರತಿಭಟನಾನಿರತ 25ಕ್ಕೂ ಹೆಚ್ಚು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ಮುನಿರತ್ನ ಏಕಾಂಗಿಯಾಗಿ ಪ್ರತಿಭಟನೆ ಮುಂದುವರಿಸಿದ್ದಾರೆ.