ಮೈಸೂರು: ಬಿಜೆಪಿ ವಿರುದ್ಧ ಜನಾಕ್ರೋಶ ಮಡುಗಟ್ಟಿದೆ. ಬೂತ್ ಓಪನ್ ಆಗೋದನ್ನು ಜನ ಕಾಯುತ್ತಿದ್ದಾರೆ ಎಂದು ಮೈಸೂರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಹೇಳಿದ್ದಾರೆ. ಬಿಜೆಪಿ ಕೇಂದ್ರದಲ್ಲಿ 10 ವರ್ಷ ಅಧಿಕಾರ ನಡೆಸಿದೆ. ನರಸಿಂಹರಾಜ ಕ್ಷೇತ್ರಕ್ಕೆ ಒಂದೇ ಒಂದು ರೂಪಾಯಿ ಅನುದಾನ ಕೊಟ್ಟಿಲ್ಲ. ಬಿಜೆಪಿ ಬಗ್ಗೆ ಜನರಿಗೆ ಭ್ರಮಾನಿರಸನ ಆಗಿದೆ. ಕಾಂಗ್ರೆಸ್ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಗ್ಯಾರಂಟಿ ಕಾರ್ಡ್ ಹಂಚಿತ್ತು. ಈಗ ಐದೂ ಗ್ಯಾರಂಟಿ ಯೋಜನೆಗಳೂ ಜಾರಿಯಾಗಿವೆ. ಜನರಿಗೆ ನೇರವಾಗಿ ಹಣ ಸಿಗುತ್ತಿದೆ. ಈಗ ಎಐಸಿಸಿ ನ್ಯಾಯ ಪತ್ರ ಹೆಸರಿನಲ್ಲಿ ಮತ್ತೆ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದೆ. ಆ ಗ್ಯಾರಂಟಿ ಕಾರ್ಡ್ಗಳನ್ನು ಮನೆ ಮನೆಗೆ ಹಂಚುತ್ತಿದ್ದೇವೆ. ಈಗಾಗಲೇ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಜಾರಿಯಾಗಿವೆ. ಹೀಗಾಗಿ ಜನರಿಗೆ ಕಾಂಗ್ರೆಸ್ ಮೇಲೆ ವಿಶ್ವಾಸ ಬಂದಿದೆ. ನಾನು ಈ ಬಾರಿ ಗೆದ್ದೇ ಗೆಲ್ಲುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.