ಹುಬ್ಬಳ್ಳಿಯ ಗಲಭೆ ಆರೋಪಿ ಶ್ರೀಕಾಂತ್ ಪೂಜಾರಿ (Srikanth Poojary) ಯನ್ನು ಸರ್ಕಾರ 48 ಗಂಟೆಗಳಲ್ಲಿ ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ರಾಜ್ಯಾದಂತ ಪ್ರತಿಭಟಿಸುತ್ತೇವೆ ಎಂದು ಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಾಡದ್ರೋಹಿ, ದೇಶದ್ರೋಹಿ ಸರ್ಕಾರವಿದೆ ಎಂದು ವಾಗ್ದಾಳಿ ಮಾಡಿದ್ದಾರೆ.
ವಿನಾಶಕಾಲೆ ವಿಪರೀತ ಬುದ್ಧಿ ಎಂಬಂತೆ ಕಾಂಗ್ರೆಸ್ ಆಡಳಿತ ನಡೆಸುತ್ತಿದೆ. 31 ವರ್ಷದ ಹಿಂದಿನ ಘಟನೆಯ ಆಧಾರದಲ್ಲಿ ಬಂಧಿಸಲಾಗಿದೆ. ಶ್ರೀಕಾಂತ್ ಪೂಜಾರಿ ಬಂಧನವನ್ನು ಬಿಜೆಪಿ ಉಗ್ರವಾಗಿ ಖಂಡಿಸುತ್ತೆ ಎಂದು ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯರೇ ನಮಗೆ ರಾಮ ಎಂದು ಮಾಜಿ ಸಚಿವ ಆಂಜನೇಯ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಮಾಜಿ ಸಚಿವ ಆಂಜನೇಯ ತಮ್ಮ ಹೆಸರಿಗೆ ತಕ್ಕಂತೆ ಮಾತನಾಡಿಲ್ಲ. ಹೆಚ್.ಆಂಜನೇಯ ತಮ್ಮ ಹೆಸರು ಬದಲಿಸಿಕೊಳ್ಳುವುದು ಒಳ್ಳೆಯದು. ಆಂಜನೇಯ ಹೆಸರು ನಿಮಗೆ ಲಾಯಕ್ಕಿಲ್ಲ ಎಂದು ಕಿಡಿಕಾರಿದ್ದಾರೆ.