ಮೈಸೂರು: ನಗರದ ಭಾರತೀಯ ಭಾಷಾ ಸಂಸ್ಥಾನದಲ್ಲಿ ಜೂ.10ರಿಂದ 12ರವರೆಗೆ ಮೂರು ದಿನಗಳ ಭಾರತದ ಶಾಸ್ತ್ರೀಯ ಭಾಷೆಗಳ ರಾಷ್ಟ್ರೀಯ ಸಮ್ಮೇಳನ ಆಯೋಜಿಸಲಾಗಿದೆ. ಭಾರತೀಯ ಭಾಷಾ ಸಂಸ್ಥಾನದ ಪ್ರಿವ್ಯೂ ಥಿಯೇಟರ್ನಲ್ಲಿ ಜೂ.10ರಂದು ಬೆಳಗ್ಗೆ 10ಕ್ಕೆ ಸಮ್ಮೇಳನದ ಉದ್ಘಾಟನಾ ಸಮಾರಂಭ ನಡೆಯಲಿದೆ. ಸಮಾರಂಭದಲ್ಲಿ ಗುರ್ಗಾಂವ್ನ ಅಮಿಟಿ ವಿವಿಯ ಭಾಷಾಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಉದಯ ನಾರಾಯಣ ಸಿಂಗ್, ದೆಹಲಿಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯದ ಉಪ ಕುಲಪತಿ, ಪ್ರೊ. ಶ್ರೀನಿವಾಸ ವರಖೇಡಿ, ಭಾರತೀಯ ಭಾಷಾ ಸಂಸ್ಥಾನದ ನಿರ್ದೇಶಕ ಪ್ರೊ.ಶೈಲೇಂದ್ರ ಮೋಹನ್ ಅವರುಗಳು ಭಾಗವಹಿಸಲಿದ್ದಾರೆ.