ರಾಮನಗರ : ಕೋಲಾರ ಲೋಕಸಭಾ ಕ್ಷೇತ್ರ ಜೆಡಿಎಸ್ಗೆ ಸಿಗುವ ವಿಶ್ವಾಸ ಇದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ರಾಮನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ತಂದೆಯವರ ಜೊತೆ ಸೀಟು ಹಂಚಿಕೆ ವಿಚಾರವಾಗಿ ಚರ್ಚೆ ನಡೆಯುತ್ತಿದೆ. ನಾವು ಹೆಚ್ಚು ಸೀಟು ಕೇಳಿಲ್ಲ. ಕೇವಲ 3 ರಿಂದ 4 ಸ್ಥಾನಗಳನ್ನಷ್ಟೇ ಕೇಳುತ್ತಿದ್ದೇವೆ ಎಂದರು.
ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಬೇಕೆಂಬುದು ನಮ್ಮ ಆಸೆ. 28 ಸ್ಥಾನ ಗೆದ್ದು ಪ್ರಧಾನಿಗೆ ಗಿಫ್ಟ್ ಕೊಡಬೇಕು ಅಂದುಕೊಂಡಿದ್ದೇವೆ ಎಂದು ಹೇಳಿದ ನಿಖಿಲ್, ಕೋಲಾರ ವಿಧಾನ ಸಭಾ ಚುನಾವಣೆಯಲ್ಲಿ 5 ಲಕ್ಷ ಮತಗಳನ್ನು ಪಡೆದಿದೆ. ಹೀಗಾಗಿ ಅಲ್ಲಿ ಸೀಟು ಸಿಗಬಹುದೆಂಬ ಆಶಾಭಾವನೆ ಇದೆ. ನಾಳೆ ಬೆಳಿಗ್ಗೆ ಒಳಗೆ ಎಲ್ಲವೂ ತಿಳಿಯಾಗುತ್ತದೆ ಎಂದರು.