ಮಂಡ್ಯ: ನುಡಿದಂತೆ ನಡೆದಿದ್ದೇವೆ ಎನ್ನುವ ಮೂಲಕ ಸಿಎಂ ಸಿದ್ದರಾಮಯ್ಯನವರನ್ನು ನಿಖಿಲ್ ಕುಮಾರಸ್ವಾಮಿಅಣುಕಿಸಿದ್ದಾರೆ. ಇಂದು ಶ್ರೀರಂಗಪಟ್ಟಣದಲ್ಲಿ ಆಯೋಜಿಸಿದ್ದ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸಿಎಂ ಆದಾಗ ಬರಗಾಲ ಬಂದಿದೆ. ಈಗಾಗಲೇ 800ಕ್ಕೂ ಹೆಚ್ಚು ಜನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಮಧ್ಯೆ ಕಾಂಗ್ರೆಸ್ ಅವರು ಪ್ರತಿ ಜಿಲ್ಲೆಯಲ್ಲಿ ಐದು ಗ್ಯಾರಂಟಿಗಳ ಸಭೆ ಮಾಡಿಕೊಂಡು 4 ರಿಂದ 5 ಕೋಟಿ ದುಂದುವೆಚ್ಚ ಮಾಡುತ್ತಿದ್ದಾರೆ. ಜೊತೆಗೆ ಪತ್ರಿಕೆಗಳಲ್ಲಿ ಪೇಜುಗಟ್ಟಲೇ ಜಾಹೀರಾತು ನೀಡುತ್ತಿದ್ದಾರೆ. ಈ ವೇಳೆ ಸಿದ್ದರಾಮಯ್ಯನವರ ಅನುಕರಣೆ ಮಾಡಿ, ನುಡಿದಂತೆ ನಡೆದಿದ್ದೇವೆ ಎಂದು ಹೇಳುವ ಮೂಲಕ ಅಣುಕಿಸಿದ್ದಾರೆ.