ಮೈಸೂರು: ರಾಜ್ಯದಲ್ಲಿ ಲಾ ಅಂಡ್ ಆರ್ಡರ್ ಹಾಗು ಗುಪ್ತಚರ ಇಲಾಖೆ ಸಂಪೂರ್ಣ ವಿಫಲವಾಗಿದೆ. ಒಂದು ಸಮುದಾಯದ ಓಲೈಕೆಗಾಗಿ ಇನ್ನೊಂದು ಸಮುದಾಯವನ್ನು ಕೈ ಬಿಟ್ಟಿದ್ದಾರೆ ಎಂದು ರಾಜ್ಯ ಸರ್ಕಾರದ ಕಾರ್ಯ ವೈಖರಿಗೆ ನಿಖಿಲ್ ಕುಮಾರಸ್ವಾಮಿ ಬೇಸರ ವ್ಯಕ್ತ ಪಡಿಸಿದ್ದಾರೆ.
ಮೈಸೂರಿನ ಮೇಟಗಳ್ಳಿಯ ಖಾಸಗಿ ಕಲ್ಯಾಣ ಮಂಟಪದಲ್ಲಿ, ಜೆಡಿಎಸ್ ಪ್ರಾಥಮಿಕ ಸದಸ್ಯತ್ವ ನೋಂದಣಿ ಹಾಗೂ ಬೂತ್ ಸಮಿತಿ ಅಭಿಯಾನಕ್ಕೆ ರಾಜ್ಯ ಜೆಡಿಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಚಾಲನೆ ನೀಡಿದರು. ನಂತರ ರಾಜ್ಯದಲ್ಲಿ ಗಣೇಶ ಗಲಾಟೆ ವಿಚಾರವಾಗಿ ಮಾತನಾಡಿ ದ ಅವರು, ರಾಜ್ಯದಲ್ಲಿ ಲಾ ಅಂಡ್ ಆರ್ಡರ್ ಹಾಗು ಗುಪ್ತಚರ ಇಲಾಖೆ ಸಂಪೂರ್ಣ ವಿಫಲವಾಗಿದೆ. ಒಂದು ಸಮುದಾಯದ ಓಲೈಕೆಗಾಗಿ ಇನ್ನೊಂದು ಸಮುದಾಯವನ್ನು ಕೈ ಬಿಟ್ಟಿದ್ದಾರೆ. ಮಂಡ್ಯದ ಜನ ಸಾಕಷ್ಟು ಪ್ರಬುದ್ದರಿದ್ದಾರೆ ಎಲ್ಲವನ್ನೂ ಗಮನಿಸುತ್ತಾ ಇದ್ದಾರೆ. ರಾಜ್ಯ ಸರ್ಕಾರ ಯಾವ ರೀತಿ ನಡೆದುಕೊಳ್ಳುತ್ತಿದೆ ಎಂದು ಗೊತ್ತಾಗುತ್ತಿದೆ.
ರಾಜ್ಯ ಸರ್ಕಾರ ಹಗರಣದಲ್ಲಿ ನಿರತವಾಗಿದೆ ಅದನ್ನು ಮುಚ್ಚಿಕೊಳ್ಳಲು ಈ ರೀತಿಯ ಗಲಾಟೆ ಇತ್ಯಾದಿಗಳನ್ನು ಮಾಡಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಚನ್ನಪಟ್ಟಣ ಬೈ ಎಲೆಕ್ಷನ್ ವಿಚಾರ ಸಂಬಂಧ ಈಗಾಗಲೇ ಸಿ ಪಿ ಯೋಗೇಶ್ವರ್ ಕೂಡ ಸಭೆಗಳನ್ನು ಮಾಡುತ್ತಿದ್ದಾರೆ ಹಾಗೆಯೇ ನಾವು ಕೂಡ ನಮ್ಮ ಕಾರ್ಯಕರ್ತರ ಜೊತೆ ಸಭೆ ಮಾಡುತ್ತಿದ್ದೇವೆ. ಒಟ್ಟಾರೆಯಾಗಿ ಎನ್ ಡಿ ಎ ಅಭ್ಯರ್ಥಿ ಕಣಕ್ಕಿಳಿಯುತ್ತಾರೆ. ನಾನು ನಿಲ್ಲುತ್ತೇನೋ, ಇನ್ಯಾರು ನಿಲ್ಲುತ್ತಾರೋ ಎಂಬ ಪ್ರಶ್ನೆ ಸದ್ಯಕ್ಕಿಲ್ಲ. ಇನ್ನೂ ಉಪ ಚುನಾವಣೆ ದಿನಾಂಕ ಪ್ರಕಟ ಆಗಿಲ್ಲ. ಕಾರ್ಯಕರ್ತರ ಭಾವನೆಗೆ ತಕ್ಕಂತೆ ಕೆಲಸ ಮಾಡ್ತೀವಿ ಎಂದಿದ್ದಾರೆ.
ಶಾಸಕ ಮುನಿರತ್ನ ವಿರುದ್ದ ಜಾತಿ ನಿಂದನೆ ಪ್ರಕರಣ ವಿಚಾರ ತನಿಖೆ ಪ್ರಾರಂಭವಾಗಿದೆ, ತನಿಖೆ ನಡೆಯುತ್ತಿದ್ದು ಎಫ್ಎಸ್ಎಲ್ ವರದಿ ಬರಬೇಕಿದೆ. ವರದಿ ಬಂದ ನಂತರ ಸತ್ಯಾಸತ್ಯತೆ ಹೊರ ಬರತ್ತದೆ. ರಾಜ್ಯ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಪಿಎಸ್ಐ ಪರಶುರಾಮ ಆತ್ಮಹತ್ಯೆ ಪ್ರಕರಣಕ್ಕೆ ರಾಜ್ಯ ಸರ್ಕಾರ ಯಾವ ರೀತಿ ಕ್ರಮ ಜರುಗಿಸಿದೆ ಎಂದು ನೋಡಿದ್ದೇವೆ ಎಂದು ರಾಜ್ಯ ಸರ್ಕಾರದ ಕಾರ್ಯ ವೈಖರಿ ವಿರುದ್ಧ ಕಿಡಿಕಾರಿದ್ದಾರೆ.
ಕಾರ್ಯಕ್ರಮದಲ್ಲಿ ಕೋರ್ ಕಮಿಟಿ ಅಧ್ಯಕ್ಷ ಜಿ ಟಿ ದೇವೇಗೌಡ, ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಕಾರ್ಯಾಧ್ಯಕ್ಷ ಸಾ ರಾ ಮಹೇಶ್, ಎಂಎಲ್ಸಿ ಸಿ ಎನ್ ಮಂಜೇಗೌಡ, ಶಾಸಕ ಜಿ ಡಿ ಹರೀಶ್ ಗೌಡ ಸೇರಿದಂತೆ ಸ್ಥಳೀಯ ಜೆಡಿಎಸ್ ಮುಖಂಡರು, ನೂರಾರು ಕಾರ್ಯಕರ್ತರು ಉಪಸ್ಥಿತಿ.