ಹಲವು ದಶಕಗಳಿಂದ ಕರ್ನಾಟಕ ತಮಿಳನಾಡು ಮಧ್ಯೆ ಕಾವೇರಿ ಸಮಸ್ಯೆ ಹಾಗೇ ಉಳಿದಿದೆ. ಆದ್ಯತೆ ಮೇರೆಗೆ ಮೊದಲು ಕುಡಿಯುವುದಕ್ಕೆ ನೀರು ಕೊಡಬೇಕು ಅನಂತರ ವ್ಯವಸಾಯ, ಕೈಗಾರಿಕೆಗೆ ಎಂದು ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು.
ಕಾವೇರಿ ವಿಚಾರಕ್ಕೆ ಸಂಬಂಧಿಸಿದಂತೆ ಮಂಡ್ಯದಲ್ಲಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪ್ರತಿವರ್ಷ ತಮಿಳುನಾಡಿಗೆ 419TMC ನೀರು,ಕರ್ನಾಟಕಕ್ಕೆ 270TMC ನೀರು ನಿಗದಿ ಮಾಡಲಾಗಿದೆ.
ಆದರೆ ಮಳೆ ಕಡಿಮೆ ಆದ ಸಂಧರ್ಭದಲ್ಲಿ ನೀರು ಹಂಚಿಕೆ ಸಮಸ್ಯೆ ಎದುರಾಗುತ್ತದೆ ಆಗ ಸಂಕಷ್ಟ ಸೂತ್ರ ರಚಿಸಬೇಕಿತ್ತು ಎಂದರು.
ಈ ವರ್ಷ ಮಳೆ ಅಭಾವದಿಂದ ನಮ್ಮಲ್ಲಿ ಬೆಳೆಗೆ ಬಿಡಿ, ಕುಡಿಯಲು ನೀರು ಸಿಗದಂತಾಗಿದೆ. ಡ್ಯಾಂನಲ್ಲಿ ನೀರಿನ ಸಂಗ್ರಹ ಕಡಿಮೆ ಇದೆ. ಒಂದೆಡೆ ನೀರು ಇಲ್ಲದಿದ್ರೆ ಬೆಳೆ ಒಣಗುವುದು ಒಂದೆಡೆಯಾದರೆ ಇನ್ನೊಂದೆಡೆ ಕುಡಿಯಲು ನೀರು ಸಿಗದಿದ್ದರೆ ಮನುಷ್ಯನೇ ಒಣಗಿಹೋಗುತ್ತಾನೆ. ಸದ್ಯ ಬೆಳೆಗಿಂತ ಮನುಷ್ಯ ಅಸ್ತಿತ್ವವೇ ಈಗ ಪ್ರಶ್ನೆ ಆಗಿದೆ. ತಮಿಳುನಾಡು ಬೆಳೆಗೆ ನೀರು ಕೇಳುತ್ತದೆ ನಮಗೆ ಕುಡಿಯುಲು ನೀರು ಬೇಕಾಗಿದೆ. ಇಂಥ ಪರಿಸ್ಥಿತಿಯಲ್ಲಿ ನ್ಯಾಯಾಧೀಶರು ಆದೇಶ ನೀಡುವ ಮುನ್ನ ನಮ್ಮ ನೋವನ್ನು ಕೇಳಬೇಕಿತ್ತು ಎಂದು ತೀರ್ಪಿನ ವಿರುದ್ಧ ಬೇಸರ ವ್ಯಕ್ತಪಡಿಸಿದರು.
ಪ್ರತಿದಿನ 5 ಸಾವಿರ ಕ್ಯೂಸೆಕ್ ಹರಿಸಲಾಗಿದೆ. ಈಗ ಮತ್ತೆ ಹದಿನೈದು ದಿನಗಳ ಕಾಲ ದಿನಕ್ಕೆ 5 ಸಾವಿರ ಕ್ಯೂಸೆಕ್ ನೀರು ಹರಿಸಲು ಸೂಚನೆ ನೀಡಿದ್ದಾರೆ. ಈ ಆದೇಶದಂತೆ ನೀರು ಹರಿದರೆ ಡ್ಯಾಂನಲ್ಲಿ ನೀರು ಉಳಿಯುವುದಿಲ್ಲ. ರಾಜ್ಯ ಹಾಗೂ ಕೇಂದ್ರ ಸರ್ಕಾರ ವಾಸ್ತವ ಪರಿಸ್ಥಿತಿಯನ್ನು ನ್ಯಾಯಾಲಯದಲ್ಲಿ ಮನವರಿಕೆ ಮಾಡಬೇಕು, ನಮ್ಮ ರೈತರ ಹಿತ ಕಾಯಬೇಕು ಎಂದು ಆಗ್ರಹಿಸಿದರು.