22 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ದ
ಪ್ರತಿನಿಧಿ ವರದಿ ಚಾಮರಾಜನಗರ
ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳು ಸಲ್ಲಿಸಿದ್ದ ನಾಮಪತ್ರಗಳ ಪರಿಶೀಲನಾ ಕಾರ್ಯ ಶುಕ್ರವಾರ ನಡೆದಿದ್ದು, ಒಟ್ಟಾರೆ ನಾಮಪತ್ರಗಳನ್ನು ಸಲ್ಲಿಸಿದ್ದ 25 ಅಭ್ಯರ್ಥಿಗಳ ಪೈಕಿ 3 ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕ್ರತಗೊಂಡಿದ್ದು, 22 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ದವಾಗಿವೆ.
ಲೋಕಸಭಾ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಗಳಾಗಿ ಗುರುಲಿಂಗಯ್ಯ, ಸಿ.ರಾಜು ಹಾಗೂ ಸಮಾಜವಾದಿ ಜನತಾ ಪಾರ್ಟಿ (ಕರ್ನಾಟಕ)ಯಿಂದ ಚಾಮದಾಸಯ್ಯ ಅವರು ಸಲ್ಲಿಸಿದ್ದ ನಾಮಪತ್ರಗಳು ತಿರಸ್ಕ್ರತವಾಗಿವೆ.
ಕ್ರಮಬದ್ದವಾಗಿರುವ ನಾಮನಿರ್ದೇಶಿತ ಅಭ್ಯರ್ಥಿಗಳ ವಿವರ : ಮಾನ್ಯತೆ ಪಡೆದ ರಾಷ್ಟ್ರೀಯ ಮತ್ತು ರಾಜ್ಯ ರಾಜಕೀಯ ಪಕ್ಷಗಳ ಅಭ್ಯರ್ಥಿಗಳಾದ ಎಂ.ಕೃಷ್ಣಮೂರ್ತಿ (ಬಹುಜನ ಸಮಾಜ ಪಾರ್ಟಿ), ಎಸ್. ಬಾಲರಾಜು (ಭಾರತೀಯ ಜನತಾ ಪಾರ್ಟಿ), ಸುನೀಲ್ ಬೋಸ್ (ಇಂಡಿಯನ್ ನ್ಯಾಷನಲ್ ಕಾಂಗ್ರೆಸ್), ನೋಂದಾಯಿತ ರಾಜಕೀಯ ಪಕ್ಷಗಳ ಅಭ್ಯರ್ಥಿಗಳಾದ ಸಿ.ಎಂ.ಕೃಷ್ಣ (ಡಾ.ಅಂಬೇಡ್ಕರ್ ಪೀಪಲ್ಸ್ ಪಾರ್ಟಿ), ನಿಂಗರಾಜು. ಎಸ್ (ಕರ್ನಾಟಕ ಜನತಾ ಪಕ್ಷ), ಪ್ರಸನ್ನ ಕುಮಾರ್. ಬಿ (ಕರ್ನಾಟಕ ಪ್ರಜಾ ಪಾರ್ಟಿ (ರೈತ ಪರ್ವ)), ಕಂದಳ್ಳಿ ಮಹೇಶ್ (ಕರ್ನಾಟಕ ರಾಷ್ಟ್ರ ಸಮಿತಿ), ಸುಮ.ಎಸ್. (ಸೋಷಿಯಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಪಕ್ಷ) ಹಾಗೂ ಸ್ವತಂತ್ರ (ಪಕ್ಷೇತರ) ಅಭ್ಯರ್ಥಿಗಳಾದ ಕದಂಬ ನಾ. ಅಂಬರೀಷ್, ನಟರಾಜು, ಎಂ. ನಾಗೇಂದ್ರಬಾಬು, ನಿಂಗರಾಜು. ಜಿ, ನಿಂಗರಾಜು. ಜೆ, ಪಟಾಸ್ ಪ್ರದೀಪ್ ಕುಮಾರ್.ಎಂ, ಬಲ್ಲಯ್ಯ (ಬಾಲು), ಮಹದೇವಸ್ವಾಮಿ. ಬಿ.ಎಂ (ಪಂಪಿ), ಜಿ.ಡಿ. ರಾಜಗೋಪಾಲ (ಎಚ್.ಡಿ.ಕೋಟೆ), ಕೆ.ರಾಜು, ಸಿ.ಶಂಕರ ಅಂಕನಶೆಟ್ಟಿಪುರ, ಸಣ್ಣಸ್ವಾಮಿ, ಎಚ್.ಕೆ.ಸ್ವಾಮಿ ಹರದನಹಳ್ಳಿ, ಸುಭಾಷ್ ಚಂದ್ರ ಅವರ ನಾಮಪತ್ರಗಳು ಕ್ರಮಬದ್ದವಾಗಿವೆ ಎಂದು ಜಿಲ್ಲಾ ಚುನಾವಣಾಧಿಕಾರಿ ಶಿಲ್ಪಾನಾಗ್ ತಿಳಿಸಿದ್ದಾರೆ.
5ಸಿಎಚ್ಎನ್.5: