ಆರೋಗ್ಯ ಸಚಿವ ದಿನೇಶ್ ಗಂಡೂರಾವ್ ಹೇಳಿಕೆ । ಹೆರಿಗೆ ಆಸ್ಪತ್ರೆಯಲ್ಲಿ ಹಣ ಪಡೆಯುವ ಬಗ್ಗೆ ಕ್ರಮ
ಪ್ರತಿನಿಧಿ ವರದಿ ಮೈಸೂರು
ಹೆರಿಗೆ ಆಸ್ಪತ್ರೆಗಳಲ್ಲಿ ಹಣ ಪಡೆಯುವ ವಿಚಾರದ ಕುರಿತಂತೆ ಹೆಚ್ಚಿನ ಗಮನವಹಿಸುವ ಮೂಲಕ ಕಠಿಣ ಕ್ರಮವಹಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಮೈಸೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆರಿಗೆ ಆಸ್ಪತ್ರೆಗಳಲ್ಲಿ ಹಣ ಪಡೆಯುವ ವಿಚಾರದ ಕುರಿತಂತೆ ನಮ್ಮ ಇಲಾಖೆಯಲ್ಲಿ ಎಲ್ಲವೂ ಸರಿಯಿದೆ ಎಂದು ನಾನು ಹೇಳುವುದಿಲ್ಲ. ನಮ್ಮ ವ್ಯವಸ್ಥೆಯಲ್ಲಿ ಇಂದಿಗೂ ಇಂತಹ ಸಂಗತಿಗಳು ನಡೆಯುತ್ತಿದ್ದು, ಇದನ್ನು ಗಮನ ಹರಿಸಿ ಅಂತಹವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.
ರಾಜ್ಯದ ಹಲವೆಡೆ ಭ್ರೂಣ ಹತ್ಯೆ ಪ್ರಕರಣಗಳು ಬೆಳಕಿಗೆ ಬಂದಿರುವ ವಿಚಾರದ ಕುರಿತು ಮಾತನಾಡಿದ ಅವರು, ಭ್ರೂಣ ಹತ್ಯೆ ವಿಚಾರದಲ್ಲಿ ನಮ್ಮ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿ ಹದ್ದಿನ ಕಣ್ಣಿಟ್ಟು ಗಮನ ಹರಿಸುತ್ತಿದ್ದಾರೆ. ಎಲ್ಲೆಲ್ಲಿ ಭ್ರೂಣ ಹತ್ಯೆ ಆಗುತ್ತಿತ್ತೋ, ಆ ಎಲ್ಲ ಕಡೆಗಳಲ್ಲೂ ದಾಳಿ ನಡೆಸಿ ಹಿಡಿದಿದ್ದೇವೆ. ನಮ್ಮ ಇಲಾಖೆಯಿಂದ ತಪ್ಪು ಮಾಡಿದವರನ್ನು ಪತ್ತೆ ಮಾಡಲಿದ್ದು, ಕೋರ್ಟ್ ಮೂಲಕ ಶಿಕ್ಷೆ ಆಗಬೇಕು ಎಂದು ಹೇಳಿದರು.
ನಿಷ್ಪಕ್ಷಪಾತ ತನಿಖೆ:
ರೇಣುಕಾಸ್ವಾಮಿ ಅವರ ಮರಣೋತ್ತರ ವರದಿ ತಿರುಚಲು ಹಣ ಆಫರ್ ಮಾಡಲಾಗಿದೆ ಎಂಬ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ಆ ರೀತಿ ನಡೆದಿದ್ದರೆ ಅದರ ಬಗ್ಗೆ ಪರಿಶೀಲನೆ ನಡೆಸಲಿದ್ದು, ತನಿಖೆ ವಿಚಾರದಲ್ಲಿ ನಾವು ಯಾರು ಸಹ ಮೂಗು ತೂರಿಸಿಲ್ಲ. ರೇಣುಕಾಸ್ವಾಮಿ ಅವರನ್ನು ಹೀನಾಯ ರೀತಿಯಲ್ಲಿ ಕೊಲೆ ಮಾಡಲಾಗಿದ್ದು, ಪ್ರಕರಣದ ಬಗ್ಗೆ ಪೊಲೀಸರ ನಿಷ್ಪಕ್ಷಪಾತವಾಗಿ ತನಿಖೆ ನಡೆಸುತ್ತಿದ್ದಾರೆ. ತಪಿಸ್ಥರಿಗೆ ಶಿಕ್ಷೆಯಾಗಬೇಕು ಎಂಬುದು ನಮ್ಮ ಬಯಕೆಯಾಗಿದೆ. ಯಾವ ಅಭಿಮಾನಗಳು ಸಹ ಅತಿರೇಖಕ್ಕೆ ಹೋಗಬಾರದು. ಅಭಿಮಾನ ಅತಿರೇಖಕ್ಕೆ ಹೋದಾಗ ಅಸಹಿಷ್ಣತೆ ಉಂಟಾಗುತ್ತದೆ. ನಾನು ಹೇಳಿದ್ದು, ಸತ್ಯ ನನ್ನಂದಿಲ್ಲೇ ಎಂಬ ಮನೋಭಾವಗಳು ಎಲ್ಲ ಕ್ಷೇತ್ರದಲ್ಲೂ ಬದಲಾಗಬೇಕು ಎಂದು ದಿನೇಶ್ ಗುಂಡೂರಾವ್ ಅವರು ತೀಕ್ಷ್ಣ ಪ್ರತಿಕ್ರಿಯೆ ನೀಡಿದರು.
ಬೆಲೆ ಏರಿಕೆಗೆ ಸಮರ್ಥನೆ:
ಬೇರೆ ರಾಜ್ಯಗಳಿಗ ಹೋಳಿಸಿದರೆ ನಮ್ಮ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಇದೆ. ಕೇಂದ್ರ ಸರ್ಕಾರ ತನಗೆ ಬರುವ ತೆರಿಗೆ ಸುಂಕವನ್ನು ಇಳಿಸದೆ ಕೇವಲ ನಮ್ಮನ್ನು ಮಾತ್ರ ತೆರಿಗೆ ಇಳಿಸಿ ಎಂದರೆ ಹೇಗೆ?. ಗ್ಯಾರಂಟಿ ಯೋಜನೆಗಾಗಿಯೇ ಬೆಲೆ ಏರಿಕೆಯಾಗಿದೆ ಎಂಬುದರಲ್ಲಿ ಯಾವುದೇ ಅರ್ಥ ಇಲ್ಲ. ಅಭಿವೃದ್ಧಿ ಕಾರ್ಯಗಳಿಗೆ ಹಣ ಅನಿರ್ವಾಯವಾಗಿದ್ದು, ಅದಕ್ಕಾಗಿ ಈ ರೀತಿ ಸಂಪನ್ಮೂಲ ಕ್ರೋಢಿಕರಣ ಮಾಡುತ್ತಿದ್ದೇವೆ. ಗ್ಯಾರಂಟಿ ನಿಲ್ಲಿಸುವುದು, ಪರಿಷ್ಕರಣೆ ಮಾಡುವುದು ಯಾವುದು ಇಲ್ಲ. ಗ್ಯಾರಂಟಿ ಯೋಜನೆಗಳ ಬಗ್ಗೆ ಅಧ್ಯಯನ ಮಾಡದೆ ಮರು ಪರಿಶೀಲನೆ ಮಾಡಿ ಎನ್ನುವುದು ಸರಿಯಲ್ಲ ಸಚಿವರು ಹೇಳಿದರು.
==================