ಪ್ರತಿನಿಧಿ ವರದಿ ಕೊಳ್ಳೇಗಾಲ
ಪಟ್ಟಣದ ಎಂ.ಜಿ.ಎಸ್.ವಿ ಕಾಲೇಜು ಮೈದಾನದಲ್ಲಿ ಮೇ 14 ರಂದು ಸಂಜೆ 6 ಗಂಟೆಗೆ ಸಂಸದ ದಿ.ವಿ.ಶ್ರೀನಿವಾಸಪ್ರಸಾದ್ ಅವರ ಸ್ಮರಣಾರ್ಥ ಸ್ವಾಭಿಮಾನದ ದೊರೆ ಅಜರಾಮರ ಎಂಬ ಕಾರ್ಯಕ್ರಮವನ್ನು ಕೊಳ್ಳೇಗಾಲದ ವಿ.ಶ್ರೀನಿವಾಸಪ್ರಸಾದ್ ಅಭಿಮಾನಿ ಬಳಗದಿಂದ ಆಯೋಜಿಸಲಾಗಿದೆ.
ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹಾದೇವಪ್ಪ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಕೊಳ್ಳೇಗಾಲದ ಶಾಸಕ ಎ.ಆರ್.ಕೃಷ್ಣಮೂರ್ತಿ ಅಧ್ಯಕ್ಷತೆವಹಿಸಲಿದ್ದಾರೆ. ಚಾ.ನಗರ ಕ್ಷೇತ್ರದ ಶಾಸಕ ಶಾಸಕ ಸಿ.ಪುಟ್ಟರಂಗಶೆಟ್ಟಿ ಕಾರ್ಯಕ್ರಮದಲ್ಲಿ ವಿ.ಶ್ರೀನಿವಾಸ ಪ್ರಸಾದ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಿದ್ದಾರೆ.
ದಿ.ವಿ.ಶ್ರೀನಿವಾಸಪ್ರಸಾದ್ ಅವರ ಪತ್ನಿ ಭಾಗ್ಯಲಕ್ಷ್ಮಿ ಅವರ ಉಪಸ್ಥಿತಿಯಲ್ಲಿ ಆಯೋಜಿಸಿರುವ ಈ ಕಾರ್ಯಕ್ರಮದಲ್ಲಿ ನಂಜನಗೂಡು ಶಾಸಕ ದರ್ಶನ್ ಧ್ರುವನಾರಾಯಣ್ ನುಡಿನಮನ ಸಲ್ಲಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಗಣೇಶ್ ಪ್ರಸಾದ್, ಮಾಜಿ ಶಾಸಕರಾದ ಎಸ್.ಜಯಣ್ಣ, ಆರ್.ನರೇಂದ್ರ, ಜಿ.ಎನ್.ನಂಜುಂಡಸ್ವಾಮಿ, ಹರ್ಷವಧನ್, ಚಾ.ನಗರ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್, ಅಂಬೇಡ್ಕರ್ ಪ್ರತಿಮೆ ನಿರ್ಮಾತೃ ಓಲೆ ಮಹಾದೇವ, ಬೆಂಗಳೂರಿನ ಎಸಿಪಿ ಎಚ್.ಕೆ.ಮಹಾನಂದ್, ಕೊಳ್ಳೇಗಾಲ ಡಿವೈಎಸ್ಪಿ ಎಂ.ಧರ್ಮೇಂದ್ರ, ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಎಇಇ ಎಸ್.ಆನಂದಮೂರ್ತಿ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ ಎಂದು ಕಾರ್ಯಕ್ರಮದ ರೂವಾರಿ ನಗರಸಭಾ ಮಾಜಿ ಅಧ್ಯಕ್ಷ ಎಸ್.ರಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.