ಪ್ರತಿನಿಧಿ ವರದಿ ಚಾಮರಾಜನಗರ
ಡಾ.ಬಾಬು ಜಗಜೀವನ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮವು ಚರ್ಮ ಕುಶಲಕರ್ಮಿಗಳ ಕುಂದುಕೊರತೆಗಳನ್ನು ಆಲಿಸಲು ಆ.30 ರಂದು ಬೆಂಗಳೂರಿನ ವಸಂತನಗರದಲ್ಲಿರುವ ನಿಗಮದ ಕೇಂದ್ರ ಕಚೇರಿ ಸಭಾಂಗಣದಲ್ಲಿ ಸಭೆ ಆಯೋಜಿಸಿದೆ. ಸಂಬಂಧಪಟ್ಟ ಕುಶಲಕರ್ಮಿಗಳು ಸಭೆಗೆ ಹಾಜರಾಗಿ ಕುಂದು ಕೊರತೆಗಳನ್ನು ಮೌಖಿಕವಾಗಿ, ಲಿಖಿತವಾಗಿ ಮನವಿಗಳನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ.0821-2444019, ಮೊ.ಸಂ.9741833307 ಸಂಪರ್ಕಿಸುವಂತೆ ಡಾ.ಬಾಬು ಜಗಜೀವನ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಜಿಲ್ಲಾ ಸಂಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.