- ಡಾ. ಬಿ.ಆರ್.ಅಂಬೇಡ್ಕರ್ ಸಂಘಗಳ ಒಕ್ಕೂಟ, ವಿ.ಶ್ರೀನಿವಾಸ ಪ್ರಸಾದ್ ಅಭಿಮಾನಿಗಳ ಬಳಗದ ವತಿಯಿಂದ ವಿ.ಶ್ರೀನಿವಾಸಪ್ರಸಾದ್ ಅವರಿಗೆ ನಮನ
ಪ್ರತಿನಿಧಿ ವರದಿ ಚಾಮರಾಜನಗರ
ವಿ.ಶ್ರೀನಿವಾ ಸ ಪ್ರಸಾದ್ ಅವರ ನಿಧನದ ಗೌರವಾರ್ಥ ಡಾ. ಬಿ.ಆರ್.ಅಂಬೇಡ್ಕರ್ ಸಂಘಗಳ ಒಕ್ಕೂಟ ಹಾಗೂ ವಿ.ಶ್ರೀನಿವಾಸ ಪ್ರಸಾದ್ ಅಭಿಮಾನಿಗಳ ಬಳಗದ ವತಿಯಿಂದ ಮೇ.14ರಂದು ನಗರದಲ್ಲಿ ಸ್ವಾಭಿಮಾನಿ ಚಕ್ರವರ್ತಿ ವಿ.ಶ್ರೀನಿವಾಸಪ್ರಸಾದ್ ನಿಮಗಿದೋ ನಮ್ಮ ನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಡಾ.ಬಿ.ಆರ್. ಅಂಬೇಡ್ಕರ್ ಸಂಘಗಳ ಒಕ್ಕೂಟದ ಅಧ್ಯಕ್ಷ ಸಿ.ಕೆ.ಮಂಜು ನಾಥ್ ಹೇಳಿದರು.
ಅಂದು ನಗರದ ಡಾ.ರಾಜ್ ಕುಮಾರ್ ರಂಗ ಮಂದಿರದಲ್ಲಿ ಬೆಳಗ್ಗೆ 11 ಗಂಟೆಗೆ ಆರಂಭವಾಗುವ ಸಮಾರಂಭದ ದಿವ್ಯಸಾನಿಧ್ಯವನ್ನು ಕೊಳ್ಳೇಗಾಲ ದ ಜೇತವನ ಬೌದ್ದವಿಹಾರದ ಮನೋರಖ್ಖಿತ ಭಂತೇಜಿ ವಹಿಸಲಿದ್ದಾರೆ. ಹಿರಿಯ ಸಾಹಿತಿ ಡಾ.ಮೂಡ್ನಾ ಕೂಡು ಚಿನ್ನಸ್ವಾಮಿ
ಕಾರ್ಯಕ್ರಮವನ್ನು ಉದ್ಘಾಟಿಸುವರು. ಶಾಸಕ ಸಿ.ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು, ಕೊಳ್ಳೇಗಾಲ ಕ್ಷೇತ್ರ ಶಾಸಕ ಎ.ಆರ್.ಕೃಷ್ಣಮೂರ್ತಿ ಪುಷ್ಷಾರ್ಚನೆ ನೆರವೇರಿಸುವರು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮೈಸೂರು ವಿವಿಯ ಕಾಲೇಜು ಅಭಿವೃದ್ಧಿ ಪರಿಷತ್ ನಿರ್ದೇಶಕ ಪ್ರೊ.ಡಿ.ಆನಂದ್ ಹಾಗೂ ನಿವೃತ್ತ ಅರಣ್ಯ ಸಂರಕ್ಷಣಾಧಿಕಾರಿ ಡಾ.ಆರ್.ರಾಜು ನುಡಿ ನಮನ ಸಲ್ಲಿಸುವವರು, ವಿ.ಶ್ರೀನಿವಾಸ ಪ್ರಸಾದ್ ಅವರ ಪುತ್ರಿ ಪ್ರತಿಮಾ ಪ್ರಸಾದ್, ವಿ.ಶ್ರೀನಿವಾಸಪ್ರಸಾದ್ ಅವರ ಆಪ್ತರಾದ ಎಂ.ವೆಂಕಟಪತಿ ತಿರುಪ್ಪೂರ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಹೀಗಾಗಿ ಈ ಕಾರ್ಯಕ್ರಮ ಕ್ಕೆ ಸಂಘ, ಸಂಸ್ಥೆಯ ಪದಾಧಿಕಾರಿಗಳು, ಶ್ರೀನಿವಾ ಸ್ ಪ್ರಸಾದ್ ಅವರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.
ಡಿಎಸ್ಎಸ್ ಜಿಲ್ಲಾ ಸಂ ಯೋಜಕ ಕೆ.ಎಂ.ನಾಗರಾಜು, ರಂಗವಾಹಿನಿ ಸಂಸ್ಥೆ ಅಧ್ಯಕ್ಷ ಸಿ.ಎಂ.ನರಸಿಂಹಮೂರ್ತಿ, ನಗರಸಭಾ ಮಾಜಿ ಸದಸ್ಯ ಬಸವರಾಜು, ಪ್ರಸನ್ನ ಕುಮಾರ್, ಮಹದೇವಸ್ವಾಮಿ, ಎಸ್ಸಿ ಎಸ್ಟಿ ಪದವೀಧರ ಒಕ್ಕೂಟ ದ ಅಧ್ಯಕ್ಷ ನಾಗಸುಂದರ್ ಇದ್ದರು.
11ಸಿಎಚ್ಎನ್.2:
ಚಿತ್ರವಿದೆ