ಹನೂರು: ತಾಲೂಕಿನ ನಕ್ಕುಂದಿ ಸರ್ಕಾರಿ ವಾಲ್ಮೀಕಿ ಆಶ್ರಮ ಶಾಲೆಯ ಎರಡು ಮಕ್ಕಳು ನವೋದಯ ಶಾಲೆಗೆ ಆಯ್ಕೆಯಾಗುವ ಮೂಲಕ ಶಾಲೆಗೆ ಹೆಸರು ತಂದಿದ್ದಾರೆ ಎಂದು ಮುಖ್ಯ ಶಿಕ್ಷಕ ನಾಗರಾಜ್ ಹೇಳಿದರು.
ಆಶ್ರಮ ಶಾಲೆಯ ಅಖಿಲೇಶ್ , ಗೋವಿಂದ ಸಿ ಎಂಬ ವಿದ್ಯಾರ್ಥಿಗಳು ನವೋದಯ ಪರೀಕ್ಷೆ ಬರೆದು ಆಯ್ಕೆಯಾಗಿದ್ದಾರೆ. ಆಯ್ಕೆಯಾದ ಮಕ್ಕಳಿಗೆ ಸಹ ಶಿಕ್ಷಕರಾದ ವೆಂಕಟೇಶ್,ಮಾದೇಶ್, ನಾಗರಾಜು ಮತ್ತು ಪೋಷಕರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.