ಗೋಣಿಕೊಪ್ಪ: ಸುಳುಗೋಡು ಪಾಲ್ಪರೆ ಚಾಮುಂಡೇಶ್ವರಿ ದೇವಸ್ಥಾನದ ಅಷ್ಠಬಂಧ ಬ್ರಹ್ಮಕಲಶ ಮಹೋತ್ಸವ ಏ.9 ರಿಂದ 12ರವರೆಗೆ ಜರುಗಲಿದೆ.
ಸ್ವಸ್ತಿಶ್ರೀ ಕ್ರೋಧಿ ನಾಮ ಸಂವತ್ಸರದ ಮೀನಮಾಸದ 26 ರಂದು ತಂತ್ರಿ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ನೇತೃತ್ವದಲ್ಲಿ ವಿವಿಧ ವೈದಿಕ ಮತ್ತು ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನೆರವೇರಲಿದೆ.
ಏ.9 ರಂದು ಸಾಯಂಕಾಲ 5.30 ಕ್ಕೆ ತಂತ್ರಿ ಹಾಗೂ ಋತ್ವಿಜರಿಗೆ ಪೂರ್ಣಕುಂಭ ಸ್ವಾಗತ, ಸಂಜೆ 6.30 ಕ್ಕೆ ದೇವತಾ ಪ್ರಾರ್ಥನೆ, ಆಚಾರ್ಯವರಣ, ಸ್ವಸ್ತಿ ಪೂಣ್ಯಾಹ ವಾಚನ, ಪ್ರಸಾದಶುದ್ದಿ, ಹೋಮ, ವಾಸ್ತು ಹೋಮ, ವಾಸ್ತು ಪೂಜಾಬಲಿ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ.
ಏ. 10 ರಂದು ಬೆ. 6.30 ಗಂಟೆಗೆ ಮಹಾ ಗಣಪತಿ ಹೋಮ, ಪ್ರಾಯಶ್ಚಿತ ಹೋಮ, ಶಾಂತಿ ಹೋಮ, ಬಿಂಬ ಶುದ್ದಿಕಲಶ ಪೂಜೆ, 12 ಗಂಟೆಗೆ ಹೋಮಗಳ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಸಂಜೆ 6.30 ಗಂಟೆಗೆ ಮಹಾ ಸುದರ್ಶನ ಹೋಮ, ದುರ್ಗಾಪೂಜೆ, ಕುಂಡ ಶುದ್ಧಿ, ಮಹಾಪೂಜೆ, ಏ.11 ರಂದು ಬೆಳಗ್ಗೆ 6.30 ಗಂಟೆಗೆ ಮಹಾಗಣಪತಿ ಹೋಮ, ಅನುಜ್ಞಾಕಲಶ ಪೂಜೆ, ತತ್ವಹೋಮ, ತತ್ವ ಕಲಶ ಪೂಜೆ, ಕುಂಭೇಶ ಕರ್ಕರಿ ಪೂಜೆ, ಬ್ರಹ್ಮಕಲಶ, ಪರಿಕಲಶ ಪೂಜೆ, 12 ಗಂಟೆಗೆ ತತ್ವಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಸಂಜೆ 6 ಗಂಟೆಗೆ ಆದಿವಾಸ ಹೋಮ, ಕಲಶಾಧಿವಾಸ, ಮಹಾಪೂಜೆ ನೆರವೇರಲಿದೆ.
ಏ.12 ರಂದು ಬೆ. 6.30 ಗಂಟೆಗೆ ಮಹಾಗಣಪತಿ ಹೋಮ, ಬೆ.9.15 ಕ್ಕೆ ವೃಷಭ ಲಗ್ನದಲ್ಲಿ ಚಾಮುಂಡೇಶ್ವರಿ ದೇವಿಗೆ ಬ್ರಹ್ಮಕಲಶಾಭಿಷೇಕ, ಆಶ್ಲೇಷ ಬಲಿ, ಪರಿವಾರ ದೇವರುಗಳಿಗೆ ಕಲಶಾಭಿಷೇಕ, ಮ. 12 ಗಂಟೆಗೆ ಮಹಾಪೂಜೆ, ವೈದಿಕ ಮಂತ್ರಾಕ್ಷತೆ, ಪ್ರಸಾದವಿತರಣೆ, ಅನ್ನಸಂತರ್ಪಣೆ ನೆರವೇರಲಿದೆ ಎಂದು ದೇವಸ್ಥಾನ ಆಡಳಿತ ಮಂಡಳಿ ಪ್ರಕಟಣೆ ತಿಳಿಸಿದೆ.
ಫೋಟೋ 7 ಜಿಕೆಪಿ 01 ; ಸುಳುಗೋಡು ಪಾಲ್ಪರೆ ಚಾಮುಂಡೇಶ್ವರಿ ದೇವಸ್ಥಾನ