ಪ್ರತಿನಿಧಿ ವರದಿ ಹನೂರು
ಪೋಷಕರು ಮಕ್ಕಳ ಕಲಿಕೆಯ ಜತೆಗೆ ಆರೋಗ್ಯದೆಡೆ ಹೆಚ್ಚಿನ ಕಾಳಜಿವಹಿಸಬೇಕೆಂದು ಎಂದು ತಾಲೂಕು ವೈದ್ಯಾಧಿಕಾರಿ ಡಾ.ಪ್ರಕಾಶ್ ಹೇಳಿದರು.
ತಾಲೂಕಿನ ಮಾರ್ಟಳ್ಳಿ ಗ್ರಾಮದ ಪಿ.ಎಂ.ಶ್ರೀ.ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಹಳೇಮಾರ್ಟಳ್ಳಿ ಇಲ್ಲಿ ಪಿ.ಎಂ.ಶ್ರೀ. ಯೋಜನಾನುದಾನದಲ್ಲಿ ಶಾಲಾ ಮಕ್ಕಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಕ್ಕಳು ಓದಿನಲ್ಲಿ ಮುಂದೆ ಬರಲು ಕಲಿಕೆಯ ಜತೆಗೆ ಆರೋಗ್ಯ ಸಹ ಚೆನ್ನಾಗಿ ನೋಡಿಕೊಳ್ಳಬೇಕು. ಆ ನಿಟ್ಟಿನಲ್ಲಿ ಎಲ್ಲರು ಪೌಷ್ಟಿಕ ಆಹಾರ ಸೇವನೆ ಮಾಡುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರು.
ಶಿಬಿರದಲ್ಲಿ ಶಾಲೆಯ ಎಲ್.ಕೆ.ಜಿ ಯಿಂದ 8ನೇ ತರಗತಿಯ ಸುಮಾರು 279 ಮಕ್ಕಳಿಗೆ ಸಾಮಾನ್ಯ ಆರೋಗ್ಯ ತಪಾಸಣೆ, ಇ.ಎನ್.ಟಿ. ಪರೀಕ್ಷೆ, ದಂತ ಪರೀಕ್ಷೆ, ಕಣ್ಣಿನ ತಪಾಸಣೆ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಮಗುವಿನ ಪೋಷಕರಿಗೆ ಸಲಹೆ, ಸೂಚನೆಗಳನ್ನು ನೀಡಿದರು.
ಸರ್ಕಾರಿ ವೈದ್ಯ ಡಾ.ಉಲ್ಲಸ್, ಡಾ.ಅನುರಾಗ್, ಶಾಲಾ ಶಿಕ್ಷಣ ಇಲಾಖೆ ಅಧಿಕಾರಿ ಬಿ.ಆರ್.ಸಿ.ವೆಂಕಟೇಶ್, ಸಿ.ಆರ್.ಪಿ.ಷಣ್ಮುಗಂ, ಬಿ.ಐ.ಇ.ಆರ್.ಟಿ.ಕೃಷ್ಣ, ಶಾಲಾ ಮುಖ್ಯ ಶಿಕ್ಷಕ ಕೆ.ಮಾದೇಶ್, ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರು, ಸದಸ್ಯರು, ಶಿಕ್ಷಕ-ಶಿಕ್ಷಕಿಯರು, ವೈದ್ಯಕೀಯ ಸಿಬ್ಬಂದಿ ಹಾಜರಿದ್ದರು.