ಪ್ರತಿನಿಧಿ ವರದಿ ನಾಪೋಕ್ಲು
ಚೆಟ್ಟಿಮಾನಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಸ್ಥಳೀಯ ಸಂಸ್ಥೆ ಸಂಪಾಜೆಗೆ ಒಳಪಟ್ಟ ಶಾಲಾ ಕಾಲೇಜುಗಳ ಕ್ಲಬ್ ಬುಲ್ ಬುಲ್, ಸ್ಕೌಟ್ಸ್, ಗೈಡ್ಸ್, ರೋವರ್ಸ್ ಮತ್ತು ರೆಂಜರ್ಸ್ ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತೆ ಮತ್ತು ಜನಪದ ಗೀತೆ ಸ್ಪರ್ಧೆ ನಡೆಯಿತು.
ಕುಂದಚ್ಚೇರಿ ಗ್ರಾಪಂ ಅಧ್ಯಕ್ಷ ಪೊಡನೋಳನ ದಿನೇಶ್ ಉದ್ಘಾಟಿಸಿ ಮಾತನಾಡಿ, ಪ್ರತಿಯೊಬ್ಬರು ಶಿಸ್ತು ಮತ್ತು ರಾಷ್ಟ್ರಪ್ರೇಮವನ್ನು ಮೈಗೂಡಿಸಿಕೊಂಡಾಗ ನಮ್ಮ ಬದುಕು ಸುಂದರವಾಗಿರುತ್ತದೆ. ಇಂತಹ ಕಾರ್ಯಕ್ರಮ ಇದಕ್ಕೆ ಪೂರಕವಾಗಿದ್ದು, ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗಿದೆ ಎಂದರು.
ಎಸ್ಡಿಎಂಸಿ ಅಧ್ಯಕ್ಷ ಕೆ.ಎಸ್.ಅಣ್ಣಯ್ಯ ಮಾತನಾಡಿ, ನಮ್ಮ ದೇಶ ನಮ್ಮ ಹೆಮ್ಮೆ ಸದಾ ನಾವು ದೇಶ ಪ್ರೇಮಿಗಳಾಗಿಯೇ ಬದುಕಿದಾಗ ಉತ್ತಮ ರಾಷ್ಟ್ರ ನಿರ್ಮಾಣ ಆಗುತ್ತದೆ ಎಂದರು.
ಸಂಪಾಜೆ ಸ್ಥಳೀಯ ಸಂಸ್ಥೆ ಅಧ್ಯಕ್ಷ ಎಂ.ಧನಂಜಯ, ಉಪಾಧ್ಯಕ್ಷ ಎ.ಎಸ್.ಶ್ರೀಧರ್, ಮುಖ್ಯ ಶಿಕ್ಷಕಿ ಬಿ.ಪಿ.ಗೀತಾಂಜಲಿ, ಜಿಲ್ಲಾ ಸಂಘಟಕಿ ದಮಯಂತಿ, ತೀರ್ಪುಗಾರ ನಾಟೋಳಂಡ ಸರೋಜ ವಿಜು, ಸಿ.ಆರ್.ಪಿ.ಎಚ್.ಎ.ಪವಿತ್ರ, ಕಾರ್ಯದರ್ಶಿ ಉಷಾರಾಣಿ, ಸಹಕಾರ್ಯದರ್ಶಿ ಬಿ.ಕೆ.ಲಲಿತ ಇದ್ದರು.