ಪ್ರತಿನಿಧಿ ವರದಿ ಸಕಲೇಶಪುರ
ಪಟ್ಟಣದ ಹಳೆಯ ಬಸ್ ನಿಲ್ದಾಣದ ಹತ್ತಿರ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸಕಲೇಶಪುರ ನಗರ ಠಾಣಾ ಪೊಲೀಸರು ಬಂಧಿಸಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಚಿಕ್ಕಮಗಳೂರು ಮೂಲದವರಾದ ಉಪ್ಪಳಿಯ ಮಹಮ್ಮದ್ ಸುಹೇಲ್( 23 ), ಕಾಲುವೆಯ ಆಟೋ ಚಾಲಕ ದಾವೂದ್ ಖಾನ್ (28) ಎಂಬುವವರೇ ಬಂಧಿತ ಆರೋಪಿಗಳು. ಇವರಿಂದ 64 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಸಕಲೇಶಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.