ಮಡಿಕೇರಿ: ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ವಿದ್ಯಾರ್ಥಿಗಳಿಗೆ ಮಂಗಳೂರು ವಿಶ್ವವಿದ್ಯಾನಿಲಯದ ಮೂರು ರ್ಯಾಂಕ್ಗಳು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಒಂದು ನಗದು ಪುರಸ್ಕಾರವನ್ನು ಕಾಲೇಜಿನ ವಿದ್ಯಾರ್ಥಿನಿ ಪಡೆದುಕೊಂಡಿದ್ದಾರೆ.
ಕೊಡವ ಎಂ.ಎ.ಸ್ನಾತಕೋತ್ತರ ಪದವಿಯಲ್ಲಿ ಲೇಖಕಿ ಬಿ.ಎನ್.ಹೇಮಾವತಿ ಪ್ರಥಮ ರ್ಯಾಂಕ್ ಪಡೆದಿದ್ದಾರೆ. ವೈ.ಆರ್.ಶಶಿ ಕಿರಣ್ ಪಿಜಿ ಡಿಪ್ಲೊಮಾ ಯೋಗವಿಜ್ಞಾನ ವಿಭಾಗದಲ್ಲಿ ಪ್ರಥಮ ರ್ಯಾಂಕ್, ಕೆ.ಎ.ಗ್ರೀಷ್ಮಾ ಎಂ.ಎ ಅರ್ಥಶಾಸ್ತ್ರದಲ್ಲಿ ಪ್ರಥಮ ರ್ಯಾಂಕ್, ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಹಂತದಲ್ಲಿ ಸೂಕ್ಷ್ಮ ಜೀವವಿಜ್ಞಾನ ವಿಷಯದಲ್ಲಿ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿನಿ ಹಿಬಾತುಲ್ ಅವರಿಗೆ ಪ್ರೊ.ಜಿ.ವಿ.ಭಟ್ ಮೆಮೋರಿಯಲ್ ನಗದು ಪುರಸ್ಕಾರ ಲಭಿಸಿದೆ.
ಜೂ.15 ರಂದು ನಡೆಯುವ ಮಂಗಳೂರು ವಿಶ್ವವಿದ್ಯಾನಿಲಯದ 42ನೇ ಘಟಿಕೋತ್ಸದದಲ್ಲಿ ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹಲೋಟ್ ಪ್ರದಾನ ಮಾಡಲಿದ್ದಾರೆ.
ಫೋಟೋ 9 ಎಂಡಿಕೆ 06 ; ಸಾಧಕರು