ನವದೆಹಲಿ : ನಾನು ರಾಜಕೀಯಕ್ಕೆ ಬಂದಿರುವುದು ರಾಜಕೀಯ ಮಾಡುವುದಕ್ಕೆ ಅಲ್ಲ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಮಂಜುನಾಥ್ ಹೇಳಿದರು. ದೆಹಲಿಯಲ್ಲಿ ಕೇಂದ್ರ ಸಚಿವ ಅಮಿತ್ ಶಾರನ್ನು ಭೇಟಿಯಾಗಿ ಮಾತನಾಡಿದ ಅವರು, ‘ ಇದೊಂದು ಸೌಹಾರ್ದಯುತ ಭೇಟಿಯಾಗಿದೆ. ಇದುವರೆಗೂ ನಾನು ಅಮಿತ್ ಶಾರನ್ನು ನೋಡಿರಲಿಲ್ಲ. ಇಂದು ಭೇಟಿಯಾಗಿ ಲೋಕಸಭಾ ಚುನಾವಣೆಗೆ ಅವರ ಸಹಕಾರ ಕೇಳಿದ್ದೇನೆ ಎಂದರು. ಅಲ್ಲದೆ ಸೋಮವಾರ ಬೆಂಗಳೂರಿನಲ್ಲಿ ಅಧಿಕೃತವಾಗಿ ಬಿಜೆಪಿ ಸೇರುತಿದ್ದೇನೆ. ವೈಯಕ್ತಿಕವಾಗಿ ಯಾರನ್ನೂ ಟೀಕಿಸಲ್ಲ, ಇದೊಂದು ಧರ್ಮಯುದ್ಧ ಇದ್ದಂತೆ. ಜಿಡಿಎಸ್ ಬಿಜೆಪಿ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಹೋದಲೆಲ್ಲಾ ಪಾಸಿಟಿವ್ ಪ್ರತಿಕ್ರಿಯೆ ಬರುತ್ತಿದೆ ಎಂದು ಹೇಳಿದರು.