ರಾಮಜನ್ಮಭೂಮಿ ಅಯೋಧ್ಯೆ ರಾಮಮಂದಿರ ನಿನ್ನೆ ಲೋಕಾರ್ಪಣೆಯಾಗಿದ್ದು ಪ್ರಧಾನಿ ಮೋದಿ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಮಾಡಿದ್ದು ಶ್ರೀರಾಮನ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದೀಗ ಬಾಲರಾಮನನ್ನ ನೋಡಲು ಭಕ್ತಸಾಗರವೇ ಹರಿದು ಬರುತ್ತಿದೆ ರಾಮಮಂದಿರ ಲೋಕಾರ್ಪಣೆಯಾದ ಬೆನ್ನಲ್ಲೆ ಬಾಲರಾಮನ ದರ್ಶನ ಪಡೆಯಲು ಭಕ್ತರ ದಂಡೇ ಲಗ್ಗೆ ಇಡುತ್ತಿದೆ. ಬೆಳಿಗ್ಗೆಯಿಂದಲೇ ಶ್ರೀರಾಮನ ದೇವಸ್ಥಾನದಲ್ಲಿ ನೂಕು ನುಗ್ಗಲು ಉಂಟಾಗಿದೆ. ದೇಶದ ಮೂಲೆ ಮೂಲೆಗಳಿಂದಲೂ ಭಕ್ತಸಾಗರ ಹರಿದು ಬರುತ್ತಿದೆ.