ಮೈಸೂರು: ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಅವರಿಗೆ ಬಿಜೆಪಿಯಿಂದ ಬಿ ಫಾರ್ಮ್ ತಲುಪಿಸಲಾಯಿತು. ಮೈಸೂರು ಅರಮನೆಯ ಯದುವೀರ್ ನಿವಾಸಕ್ಕೆ ಪಕ್ಷದ ಮುಖಂಡರು ಭೇಟಿ ನೀಡಿ ಪ್ರಮೋದಾದೇವಿ ಒಡೆಯರ್ ಸಮ್ಮುಖದಲ್ಲಿ ಬಿ ಫಾರಂ ನೀಡಿದರು. ಈ ವೇಳೆ ಶಾಸಕ ಶ್ರೀವತ್ಸ, ನಗರಾಧ್ಯಕ್ಷ ಎಲ್ ನಾಗೇಂದ್ರ, ರಾಜ್ಯ ಬಿಜೆಪಿ ಉಪಾಧ್ಯಕ್ಷ ರಾಜೇಂದ್ರ, ಮಾಜಿ ಶಾಸಕ ರಾಮದಾಸ್, ಜಿಲ್ಲಾಧ್ಯಕ್ಷ ಮಹದೇವಸ್ವಾಮಿ ಭಾಗಿಯಾಗಿದ್ದರು.