ಮೈಸೂರು : ಲೋಕಸಭಾ ಚುನಾವಣೆಗೆ ಸಜ್ಜಾಗಿರುವ ಕಾಂಗ್ರೆಸ್ ನಾಯಕರು ಚುನಾವಣಾ ಅಖಾಡ ರಂಗೇರುತ್ತಿರುವ ಬೆನ್ನಲ್ಲೇ ಮೈಸೂರು ಭಾಗದಲ್ಲಿ ಆಪರೇಷನ್ ಹಸ್ತ ನಡೆಸಲು ಮುಂದಾಗಿದ್ದಾರೆ.
ಚುನಾವಣೆ ಬೆನ್ನಲ್ಲೇ ಮೈಸೂರು-ಕೊಡಗು ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಹಾಗೂ ಜೆಡಿಎಸ್ ನಾಯಕರನ್ನ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವ ಮೂಲಕ ಪಕ್ಷದ ಬಲ ಹೆಚ್ಚಿಕೊಂಡು, ಮೈತ್ರಿ ಪಕ್ಷಕ್ಕೆ ಟಾಂಗ್ ನೀಡಲು ರಣತಂತ್ರ ರೂಪಿಸಿಕೊಂಡಿದ್ದಾರೆ.
ನಗರದ ವಿದ್ಯಾರಣ್ಯಪುರಂನಲ್ಲಿ ಮಾ.27ರಂದು ನಡೆಯುವ ಬೃಹತ್ ಸಮಾವೇಶದಲ್ಲಿ ಮೈಸೂರು ಭಾಗದ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಕಾಂಗ್ರೆಸ್ ಸೇರಲಿದ್ದಾರೆ. ಅಂದು ಬೆಳಗ್ಗೆ 10ಕ್ಕೆ ನಡೆಯುವ ಬೃಹತ್ ಸಮಾರಂಭದಲ್ಲಿ ಬಿಜೆಪಿ ಮುಖಂಡರಾದ ಎಚ್.ವಿ. ರಾಜೀವ್, ಸದಾನಂದ ಹಾಗೂ ಓಂ ಪ್ರಕಾಶ್ ಅವರುಗಳ ಜೊತೆಗೆ ಮಾಜಿ ಮೇಯರ್ ಬಿ.ಎಲ್. ಭೈರಪ್ಪ, ನಗರಪಾಲಿಕೆ ಮಾಜಿ ಸದಸ್ಯ ಕೆ.ವಿ. ಮಲ್ಲೇಶ್ ಅವರುಗಳು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ