ಮಂಡ್ಯ ಲೋಕಸಭಾ ಕ್ಷೇತ್ರವನ್ನ ಜೆಡಿಎಸ್ ಗೆ ಬಿಟ್ಟು ಕೊಟ್ಟಿರುವ ಹಿನ್ನೆಲೆ ಹಾಲಿ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಬಿಜೆಪಿ ಟಿಕೆಟ್ ಕೈತಪ್ಪಿದೆ. ಹೀಗಾಗಿ ತಮ್ಮ ಮುಂದಿನ ನಿರ್ಧಾರವನ್ನ ಏಪ್ರಿಲ್ 3 ರಂದು ಮಂಡ್ಯದಲ್ಲಿ ಪ್ರಕಟಿಸುವುದಾಗಿ ಸುಮಲತಾ ಅಂಬರೀಶ್ ತಿಳಿಸಿದ್ದು ಈ ಕುರಿತು ಕೃಷಿ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಸುಮಲತಾ ಅಂಬರೀಶ್ ಸ್ವಾಭಿಮಾನದ ನಿರ್ಧಾರ ತೆಗೆದುಕೊಳ್ಳಲಿ. ಸುಮಲತಾ ಅಂಬರೀಶ್ ಕಾಂಗ್ರೆಸ್ ಗೆ ಬೆಂಬಲ ಘೋಷಿಸಬೇಕು. ಇಲ್ಲ ಅವರು ತಟಸ್ಥವಾಗಿ ಇರಬೇಕು ಎಂದು ಹೇಳಿದ್ದಾರೆ.