ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಫೆಬ್ರವರಿ 17ರಂದು ವಿಶ್ವ ಗುರು ಬಸವಣ್ಣನವರ ಭಾವಚಿತ್ರ ಹಾಕುವಂತೆ ಸಿಎಂ ಸಿದ್ದರಾಮಯ್ಯ ಮಂಗಳವಾರ ಸೂಚನೆ ನೀಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬಸವಣ್ಣ ಭಾವಚಿತ್ರ ಅನಾವರಣಗೊಳಿಸಿ ಮಾತನಾಡಿದ ಅವರು, ಬಸವಣ್ಣನವರ ಭಾವಚಿತ್ರದಲ್ಲಿ ‘ವಿಶ್ವ ಗುರು ಬಸವಣ್ಣ -ಸಾಂಸ್ಕೃತಿಕ ನಾಯಕ’ ಎಂದು ನಮೂದಿಸಲು ಸೂಚನೆ ನೀಡಲಾಗಿದೆ. ಮನುಷ್ಯ ಮನುಷ್ಯನನ್ನು ಪ್ರೀತಿಸಿದರೆ ಸದ್ಗುಣ. ಮನುಷ್ಯ ಮನುಷ್ಯರನ್ನು ದ್ವೇಷಿಸಿದರೆ ದುರ್ಗುಣ ಎಂದು ಹೇಳಿದರು.