ಮೈಸೂರು : ಅಪ್ರಾಪ್ತೆಯ ಜೊತೆ ಗ್ರಾ.ಪಂ ಉಪಾಧ್ಯಕ್ಷ ಮದುವೆ ಮಾಡಿಕೊಂಡಿದ್ದು ಗ್ರಾಮಸ್ಥರೇ ದಾಖಲೆ ಸಮೇತ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆಗೆ ದೂರು ಸಲ್ಲಿಸಿದ ಘಟನೆ ಮೈಸೂರಿನಲ್ಲಿ ನಡೆದಿದೆ. ನಂಜನಗೂಡು ತಾಲೂಕಿನ ಅರಿಯೂರು ಗ್ರಾಮಸ್ಥರು ದಾಖಲೆ ಸಮೇತ ದೂರು ನೀಡಿದ್ದು ಅಪ್ರಾಪ್ತೆ ಮದುವೆಯಾಗಿ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಾಡ್ಯ ಗ್ರಾ.ಪಂ ಉಪಾಧ್ಯಕ್ಷ ಹರೀಶ್ ಕುಮಾರ್ ಎಂಬುವವರು ಬಾಲಕಿಯ ಆಧಾರ್ ತಿದ್ದುಪಡಿ ಮಾಡಿಸಿ ಅಪ್ರಾಪ್ತೆಯನ್ನು ಮದುವೆಯಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ನಂಜನಗೂಡಿನ ಕಲ್ಯಾಣ ಮಂಟಪದಲ್ಲಿ ಅದ್ಧೂರಿ ವಿವಾಹವಾಗಿದ್ದು ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ದೂರು ನೀಡಿದ್ದಾರೆ. ಗ್ರಾ.ಪಂ ಉಪಾಧ್ಯಕ್ಷ ಹರೀಶ್ 2023ರ ಫೆಬ್ರವರಿ 15ರಂದು ನಂಜನಗೂಡಿನ ಕಲ್ಯಾಣ ಮಂಟಪವೊಂದರಲ್ಲಿ ಮದುವೆಯಾಗಿದ್ದಾರೆ. ಶಾಲಾ ದಾಖಲಾತಿ ಪ್ರಕಾರ ಅಪ್ರಾಪ್ತೆಗೆ ಇನ್ನೂ 18 ವರ್ಷ ತುಂಬಿಲ್ಲ. ಹೀಗಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷನ ವಿರುದ್ಧ ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.