ಮೈಸೂರು : ಸಂಸದ ಪ್ರತಾಪಸಿಂಹ ವಿರುದ್ಧ ಪತ್ರಿಕಾಗೋಷ್ಠಿ ನಡೆಸದಂತೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಗೆ ಬೆಂಗಳೂರು ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ತಡೆಯಾಜ್ಞೆ ನೀಡಿದೆ. ನ್ಯಾಯಾಲಯಕ್ಕೆ ನೀಡಿದ್ದ ದೂರಿನನ್ವಯ ನೋಟಿಸ್ ಜಾರಿ ಮಾಡಿದ್ದು, ಫೆ.13ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ತಿಳಿಸಲಾಗಿದೆ. ಸಂಸದ ಪ್ರತಾಪ್ ಸಿಂಹ ವಿರುದ್ಧ ಮಾಧ್ಯಮಗಳಲ್ಲಿ ಹೇಳಿಕೆ ನೀಡದಂತೆ ಕೋರ್ಟ್ ಸೂಚನೆ ನೀಡಿದೆ. ಸಂಸದ ಪ್ರತಾಪಸಿಂಹ ಯಾವುದೇ ಒಂದು ವಿಚಾರವಾಗಿ ಪತ್ರಿಕಾಗೋಷ್ಠಿ ಮಾಡಿ ಮಾತನಾಡಿದ ಮರುದಿನವೇ ಎಂ.ಲಕ್ಷ್ಮಣ್ ಅವರು ಕೂಡ ಪತ್ರಿಕಾಗೋಷ್ಠಿ ಮಾಡಿ ಅವರ ಹೇಳಿಕೆಗಳಿಗೆ ವಾಗ್ದಾಳಿ ಮಾಡುತ್ತಿದ್ದರು. ಹೀಗಾಗಿಯೇ ಪ್ರತಾಪ್ ಸಿಂಹ ಕೋರ್ಟ್ ಮೊರೆ ಹೋಗಿದ್ದಾರೆ.