ಮೈಸೂರು: ಡಿ.ಕೆ. ಶಿವಕುಮಾರ್ ಬಾಯಿಗೆ ಮೊದಲು ಬೀಗ ಹಾಕಿ. ಬಾಯಿಗೆ ಬಂದಂತೆ ಹೇಳಿಕೆ ಕೊಡುತ್ತಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಡಿಕೆಶಿ ಭಯೋತ್ಪಾದಕರ ಪರ ಎಂಬುದು ನಮಗೆ ಗೊತ್ತಾಗಿದೆ. ಅವರ ಮೇಲೆ ನಮಗೆ ಯಾವ ನಂಬಿಕೆಗಳು ಉಳಿದಿಲ್ಲ. ಅವರು ಹೇಳಿದನ್ನು ಜನ ಕೇಳಬೇಕು ಅಂತ ಏನೂ ಇಲ್ಲ ಎಂದು ಹೇಳಿದರು.
ಇದೇ ವೇಳೆ ಬಾಂಬ್ ಸ್ಪೋಟ ವಿಚಾರಕ್ಕೆ ಮಾತನಾಡಿ, ‘ಇದು ಭಯೋತ್ಪಾದಕರ ಕೃತ್ಯ ಅಲ್ಲದೆ ಮತ್ತೇನು ? ಹೋಟೆಲ್ ನಲ್ಲಿ ಯಾರೋ ಮಕ್ಕಳು ಪಟಾಕಿ ಹೊಡೆದಿದ್ದಾರ? ಅಥವಾ ಬಲೂನ್ ಹೊಡೆದಿದ್ದಾರ ? ಅಲ್ಲಿ ಆಗಿರುವುದು ಬಾಂಬ್ ಸ್ಪೋಟ. ಇದು ಭಯೋತ್ಪಾದಕರ ಕೃತ್ಯ. ಇದು ಗುಪ್ತಚರ ಇಲಾಖೆಯ ವೈಫಲ್ಯ. ಈ ವೈಫಲ್ಯವನ್ನು ಸಿಎಂ ಮೊದಲು ಒಪ್ಪಿಕೊಳ್ಳಬೇಕು. ಭಯೋತ್ಪಾದಕರನ್ನು ಮೊದಲು ಪತ್ತೆ ಹಚ್ಚಬೇಕು ಎಂದು ಆಗ್ರಹಿಸಿದರು.