ಕಾಂಗ್ರೆಸ್ ನಾಯಕರು ಮಾಂಸ ತಿಂದು ಸುತ್ತೂರಿಗೆ ಭೇಟಿ ನೀಡಿದ್ದಾರೆಂಬ ವಿಚಾರಕ್ಕೆ ಸಚಿವ ಡಾ ಹೆಚ್ ಸಿ ಮಹದೇವಪ್ಪ ಫುಲ್ ಗರಂ ಆಗಿದ್ದಾರೆ. ಮೈಸೂರಿನಲ್ಲಿ ಈ ವಿಚಾರಕ್ಕೆ ಸಂಬಂಧಪಟ್ಟಂತೆ ಮಾತನಾಡಿದ ಅವರು, ಬಿಜೆಪಿ ಯವರು ನಮಗೆ ಊಟ ಬಡಿಸಿದ್ರಾ? ಮಾಂಸ ಸಾರು ಬಡಿಸಿದ್ರಾ?. ಬಿಜೆಪಿಯವರಿಗೆ ಜನರ ಮೂಲಭೂತ ಹಕ್ಕುಗಳ ಅರಿವಿಲ್ಲ. ಸಂವಿಧಾನದ ಆಶಯ ಗೊತ್ತಿಲ್ಲದವರು ಈ ರೀತಿ ಮಾತಾಡ್ತಿದಾರೆ. ನಮಗೆ ಬಿಜೆಪಿಯವರೇನು ಕೋಳಿ ಕೂದಿದ್ರಾ? ಮರಿ ಮಾಂಸ ತಂದಿದ್ರಾ? ಲಿವರ್ ಫ್ರೈ ಮಾಡಿ ಕೊಟ್ಟಿದ್ರಾ? ಜವಾಬ್ದಾರಿಯುತ ಸ್ಥಾನದಲ್ಲಿರುವ ಬಿಜೆಪಿಯವರು ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾತನಾಡಬೇಕು. ಅದು ಬಿಟ್ಟು ಈ ರೀತಿ ಬೇಜವಾಬ್ದಾರಿಯುತ ಹೇಳಿಕೆ ನೀಡಬಾರದು ಎಂದು ಹರಿಹಾಯ್ದರು.