ಮೈಸೂರು : ಕೇಂದ್ರ ಸರ್ಕಾರಕ್ಕೆ ಮಾನ ಮರ್ಯಾದೆ ಇಲ್ಲ, ಸರ್ವ ಶಿಕ್ಷಣ ಅಭಿಯಾನದ ಅನುದಾನಕ್ಕೂ ತಾರತಮ್ಯ ಮಾಡುತ್ತಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಆರೋಪ ಮಾಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ದೇವರಂಥ ಮಕ್ಕಳಿಗೆ ಬರಬೇಕಾದ ಹಣವನ್ನೂ ಕೊಟ್ಟಿಲ್ಲ. ಸರ್ವ ಶಿಕ್ಷಣ ಅಭಿಯಾನದ ಅಡಿಯಲ್ಲಿ ಪ್ರತಿ ಮಗುವಿಗೂ ಸರಾಸರಿ 5500 ರೂ. ಅನುದಾನ ನೀಡಬೇಕು. ಆಯಾ ರಾಜ್ಯಕ್ಕೆ ಅನುಗುಣವಾಗಿ ಶೇ.10-15ರಷ್ಟು ವ್ಯತ್ಯಾಸ ಇರುತ್ತೆ. ಆದರೆ ನಮ್ಮ ರಾಜ್ಯಕ್ಕೆ 2400 ಮಾತ್ರ ಕೊಟ್ಟಿದ್ದಾರೆ.ಇದರ ವಿರುದ್ಧ ನಾನು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರ ಬರೆದಿದ್ದೇನೆ. ಇದುವರೆಗೂ ಭೇಟಿಗೆ ಅವಕಾಶ ಕೊಟ್ಟಿಲ್ಲ. ನಮ್ಮ ಪಾಲು ಕೇಳಲು ನಾವು ಪ್ರತಿಭಟನೆ ಮಾಡಲು ಹೊರಟಿದ್ದೇವೆ ಎಂದು ಕಿಡಿಕಾರಿದರು.