ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಮೈಸೂರಿನ ರಾಮಮಂದಿರಗಳಲ್ಲಿ ವಿಶೇಷ ಪೂಜೆ, ಪ್ರಾರ್ಥನೆಗಳು ನಡೆಯುತ್ತಿವೆ. ರಾಮಲಲ್ಲಾ ವಿಗ್ರಹ ಕೆತ್ತಿದ ಅರುಣ್ ಯೋಗಿರಾಜ್ ಮನೆಯಲ್ಲಿ ಸಂಭ್ರಮ ಜೋರಾಗಿದೆ. ಮನೆಗೆ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಇನ್ನು ರಾಮಲಲ್ಲಾ ವಿಗ್ರಹದ ಶಿಲೆ ಸಿಕ್ಕಿದ ಮೈಸೂರು ತಾಲ್ಲೂಕು ಹಾರೋಹಳ್ಳಿ ಗ್ರಾಮದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನಡೆಯಲಿದೆ. ಶಾಸಕ ಜಿ ಟಿ ದೇವೇಗೌಡ ಜಮೀನು ಮಾಲೀಕ ರಾಮದಾಸ್ ಶಿಲೆ ತೆಗೆದ ಶ್ರೀನಿವಾಸ್ ಭಾಗಿಯಾಗಲಿದ್ದಾರೆ.